ಸ್ಮಶಾನದಲ್ಲಿ ಗಾಂಜಾ ಬೆಳೆದ ಚಾಲಾಕಿ ಪೊಲೀಸರ ಬಲೆಗೆ..!

Share this post :

ಕುಶಾಲನಗರ : ಸ್ಮಶಾನ ಜಾಗದಲ್ಲಿ ಗಾಂಜಾ ಗಿಡ ಬೆಳೆಸಿದ್ದ ವ್ಯಕ್ತಿಯೊಬ್ಬನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹೇರೂರು ಗ್ರಾಮದ ಪ್ರಶಾಂತ್(29) ಬಂಧಿತ ಆರೋಪಿ.
ಕುಶಾಲನಗರ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನ ಜಾಗದಲ್ಲಿ ಈತ ಗಾಂಜಾ ಗಿಡಗಳನ್ನು ಬೆಳೆದಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಈತನಿಂದ 1 ಕೆ.ಜಿ. 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಡಿ.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಪಕ ಬಿ.ಜಿ. ಪ್ರಕಾಶ್, ಕುಶಾಲನಗರ ಟೌನ್ ಸಬ್ ಇನ್ಸ್ಪೆಕ್ಟರ್ ಗೀತಾ ಮತ್ತು ಸಿಬ್ಬಂದಿ‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

coorg buzz
coorg buzz