ಮಡಿಕೇರಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಾರ್ಯಾಗಾರ ನಡೆಯಿತು.
ನಗರದ ಬಿಜೆಪಿ ಕಚೇರಿಯಲ್ಲಿ ಉಮೇಶ್ ಸುಬ್ರಹ್ಮಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸರ್ಕಾರದ ಸಾಧನೆ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ, ಕನ್ನಿಕೆ, ವಕ್ತರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಕಾಂಗೀರ ಸತೀಶ್ ಅಶ್ವಿನ್, ಪ್ರಮುಖರಾದ ಜಗದೀಶ್, ವಿವಿಧ ಮಂಡಲಗಳ ಮುಖಂಡರು ಉಪಸ್ಥಿತರಿದ್ದರು.
