ವಿರಾಜಪೇಟೆ ಮಲೆ ತಿರಿಕೆ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸುವಲ್ಲಿ ಯಶಸ್ವಿ

Virajpet Male Tirike Hill

ವಿರಾಜಪೇಟೆ: ನಗರದ ಮಲೆ ತಿರಿಕೆ ಬೆಟ್ಟದಲ್ಲಿ ಸೋಮವಾರ ಮಧ್ಯಾಹ್ನ 2:30 ವೇಳೆಯಲ್ಲಿ ವ್ಯೂ ಪಾಯಿಂಟ್ ಸಮೀಪ ರಸ್ತೆ ಬದಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯ ನಿವಾಸಿಗಳು ವಿರಾಜಪೇಟೆ (Virajpet) ಪೊಲೀಸ್ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸ್ ಇಲಾಖೆ ಅಗ್ನಿಶಾಮಕ ದಳಕ್ಕೆ ಈ ಕುರಿತ ಮಾಹಿತಿಯನ್ನು ರವಾನಿಸಿದ್ದ, ಕೆಲವೇ ಕ್ಷಣದಲ್ಲಿ ಸ್ಥಳಕ್ಕೆ ಅಗ್ನಿಶಾಮಕದಳ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದರು. ಈ ಬೆಂಕಿಯ ಕೆನ್ನಾಲಿಗೆ […]

ಎಚ್ಚರಿಕೆ: ಉಚಿತ ಲ್ಯಾಪ್ಟಾಪ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ವಂಚನೆ!

free laptops

ಆತ್ಮೀಯ ಪೋಷಕರೇ, ಕೆಲವು ದಿನಗಳಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ತೇರ್ಗಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ 8867388278 (ಟ್ರೂ ಕಾಲರ್’ನಲ್ಲಿ ದೀಪ ಗೌಡ ಎಂಬ ಹೆಸರು ಬರುತ್ತಿದೆ) ಎಂಬ ಸಂಖ್ಯೆಯಿಂದ ಕರೆಗಳು ಬರುತ್ತಿದ್ದು, ತಮ್ಮ ಮಗ/ಮಗಳಿಗೆ ಎಸ್ ಎಸ್ ಎಲ್ ಸಿ/ ಪಿ ಯು ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿರುವುದರಿಂದ ಸಾಂಸಂಗ್ ಕಂಪನಿಯ ವತಿಯಿಂದ ಸುಮಾರು ರೂ ಐವತ್ತು ಸಾವಿರ ಬೆಲೆ ಬಾಳುವ ಲ್ಯಾಪ್ಟಾಪ್ (laptop) ಉಚಿತವಾಗಿ ನೀಡುತ್ತಿದ್ದು, ವಿದ್ಯಾರ್ಥಿಗಳೊಂದಿಗೆ ಪೋಷಕರು […]

ಏಷ್ಯಾದ ದೊಡ್ಡ ಸಾಹಿತ್ಯೋತ್ಸವಕ್ಕೆ ಡಾ.ರೇವತಿ ಪೂವಯ್ಯ ಆಯ್ಕೆ

Dr.Revathi Poovaiah

ಕೇಂದ್ರ ಸಾಂಸ್ಕೃತಿಕ ಮಂತ್ರಾಲಯದ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಮಾರ್ಚ್ 7 ರಿಂದ 12ರವರೆಗೆ ನವದೆಹಲಿಯಲ್ಲಿ ಆಯೋಜಿಸಿರುವ ಸಾಹಿತ್ಯ ರಂಗದಲ್ಲೇ ಪ್ರತಿಷ್ಠಿತ ಕಾರ್ಯಕ್ರಮವಾದ ಏಷ್ಯಾದ ಅತಿದೊಡ್ಡ ಸಾಹಿತ್ಯೋತ್ಸವಕ್ಕೆ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮುಲ್ಲೇಂಗಡ ರೇವತಿ ಪೂವಯ್ಯ (Revathi Poovaiah) ಆಯ್ಕೆಯಾಗಿದ್ದಾರೆ. ಏಷ್ಯಾದ ಬೃಹತ್ ಸಾಹಿತ್ಯೋತ್ಸವ ಖ್ಯಾತಿಯ ಈ ಕಾರ್ಯಕ್ರಮದಲ್ಲಿ ಆಹ್ವಾನಿತ ಕೊಡವ ಭಾಷಾ ಕವಯಿತ್ರಿಯಾಗಿ ಕೊಡಗನ್ನು ಇವರು ಪ್ರತಿನಿಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ನಾನಾ ಸಾಂಸ್ಕೃತಿಕ ವಲಯಗಳ ಅನಾವರಣವಾಗುತ್ತದೆ.‌ ಹಲವು ದಿಗ್ಗಜ ಹಿರಿಯ ಸಾಹಿತಿಗಳು […]

ಒಣಗಿಸಲು ಇಟ್ಟಿದ್ದ ಕಾಫಿ ಕಳವು: ಆರೋಪಿಗಳ ಬಂಧನ

Coffee beans

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ತೋಟದ ಕಣದಲ್ಲಿ ಒಣಗಿಸಲು ಇಟ್ಟಿದ್ದ ಹಸಿ ಕಾಫಿಯನ್ನು (Coffee) ಕಳ್ಳತನ ಮಾಡಿರುವ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಮಾಲು ಹಾಗೂ ಕೃತ್ಯಕ್ಕೆ ಬಳಸಿದ ಮೂರು ವಾಹನಗಳ ಸಮೇತ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿತಿಮತಿ ಗ್ರಾಮದ ಶಾಂತಿನಗರದ ಕೆ. ಬಿ. ಶಫೀಕ್ (26), ಟಿ.ಜೆ. ಥೋಮಸ್ (29) ನೊಕ್ಯ ಗ್ರಾಮದ ಎಂ.ಜಿ. ಅನೀಸ್ (24) ಹಾಗೂ ಪೊನ್ನಪ್ಪ ಸಂತೆಯ ಎಂ.ಬಿ. ಯಾಸಿನ್ (28) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 51 […]

ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಇನ್ನಿಲ್ಲ

Shivu Madappa

ಮಾಜಿ ಜಿಲ್ಲಾ ಕಾಂಗ್ರೆಸ್ (Congress) ಅಧ್ಯಕ್ಷ ಕುಟ್ಟ ಗ್ರಾಮದ ನಿವಾಸಿ ಮುಕ್ಕಾಟೀರ ಶಿವು ಮಾದಪ್ಪ (49) ನಿಧನರಾಗಿದ್ದಾರೆ. ನೇರ ನುಡಿಯ ಒಬ್ಬ ನಾಯಕ, ಮಾಜಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಹಾಲಿ ಕೆಪಿಸಿಸಿ ಸದಸ್ಯರಾಗಿದ್ದ ಶಿವು ಮಾದಪ್ಪ (Shivu Madappa) ಒಬ್ಬ ಅತ್ಯುತ್ತಮ ಸಂಘಟಗಾರರಾಗಿ, ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು. ಮುಕ್ಕಾಟಿರ ಶಿವು ಮಾದಪ್ಪ ಭಾನುವಾರ ರಾತ್ರಿ 11:00 ಸಮಯದಲ್ಲಿ ಮೈಸೂರು ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸೋಮವಾರ […]