ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ಕನ್ನಡ ಪರ ಹೋರಾಟಗಾರರ ಸಭೆಯಲ್ಲಿ ಆದ ತೀರ್ಮಾನವೇನು ಗೊತ್ತಾ..?

ಬೆಂಗಳೂರು : ಎಂಇಎಸ್(mes) ಮತ್ತು ಶಿವಸೇನೆಯನ್ನ(Shivasena) ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ನಿಶ್ಚಿತ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು. ಬಂದ್ ಸಂಬಂಧ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್(Vatal Nagaraj) ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಗ್ಗೆ […]
ನವೋದಯ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಾರ್ಯಾಗಾರ – ಅನಂತಶಯನ, ಜಿ.ವಿ. ರವಿ ಕುಮಾರ್ ಅವರಿಂದ ಮಾರ್ಗದರ್ಶನ

ಮಡಿಕೇರಿ : ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಭವಿಷ್ಯ ರೂಪಿಸಲು ಸರಿಯಾದ ಆಯ್ಕೆ ಮಾಡಿಕೊಳ್ಳಬೇಕೆಂದು ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಕರೆ ನೀಡಿದರು. ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ(Navodaaya vidyalaya) ನಡೆದ ಪಿಎಂ ಶ್ರೀ ಪತ್ರಿಕೋದ್ಯಮದ(journalism) ಕುರಿತ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಯ ತುಂಬಾ ಅಮೂಲ್ಯವಾಗಿದ್ದು, ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಆ ಆಯ್ಕೆ ಬೇರೆಯವರ ಪಾಲಾಗಬಹುದು ಎಂದು ಕಿವಿಮಾತು ಹೇಳಿದರು. ಒಬ್ಬ ಪತ್ರಕರ್ತ(journalist) ಸಮಾಜಕ್ಕೆ ಎಷ್ಟು ಅಗತ್ಯ ಮತ್ತು ಪತ್ರಕರ್ತರ ಜವಾಬ್ದಾರಿಗಳೊಂದಿಗೆ ಸಮಾಜ […]
ಆರೋಗ್ಯ ಇಲಾಖೆ ಚಾಲಕ ಪಿ. ಆನಂದ ನಿಧನ

ಮಡಿಕೇರಿ : ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿದ್ದ ಪಿ. ಆನಂದ(೫೨) ನಿಧನರಾಗಿದ್ದಾರೆ. ಸುಂಟಿಕೊಪ್ಪ(suntikoppa) ಟಿ.ಸಿ.ಎಲ್. ರಸ್ತೆಯ ನಿವಾಸಿ, ವರ್ತಕ ಪಳನಿ ಸ್ವಾಮಿ ಅವರ ಪುತ್ರರಾಗಿರುವ ಆನಂದ ಮಡಿಕೇರಿಯಲ್ಲಿ ವಾಸವಿದ್ದರು. ನಿನ್ನೆ ರಾತ್ರಿ ಮಡಿಕೇರಿಯ(madikeri) ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂತಿಮ ದರ್ಶನಕ್ಕಾಗಿ ಸುಂಟಿಕೊಪ್ಪದ ಸ್ವಗೃಹದಲ್ಲಿ ಇರಿಸಲಾಗಿದ್ದು, ಇಂದು ಸಂಜೆ ಸುಂಟಿಕೊಪ್ಪ ಹಿಂದೂ(hindu) ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ತಲಕಾವೇರಿಗೆ ಭೇಟಿ ನೀಡಲಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್ – ಕಾರಣ ಏನು ಗೊತ್ತಾ..?

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಮಾರ್ಚ್ 21ರಂದು ತಲಕಾವೇರಿಗೆ(thalakaveri) ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ತಲಕಾವೇರಿಗೆ ಆಗಮಿಸಿದ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಭಾಗಮಂಡಲಕ್ಕೆ ಆಗಮಿಸಲಿರುವ ಡಿಕೆಶಿ, ಬಳಿಕ ರಸ್ತೆ ಮಾರ್ಗ ಮೂಲಕ ಜೀವನದಿ ಉಗಮ ಸ್ಥಾನಕ್ಕ ತೆರಳಲಿದ್ದಾರೆ. ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಕಾವೇರಿ ತೀರ್ಥ ಸಂಗ್ರಹಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಅವರಿಗೆ […]