ಕೋಟಿ ಚೆನ್ನಯ್ಯ ಪ್ರೀಮಿಯರ್‌ ಲೀಗ್‌ ಸೀಸನ್‌ 01 – ಪಂದ್ಯಾವಳಿಯ ಲೋಗೋ ಬಿಡುಗಡೆ…

ಮಡಿಕೇರಿ : ಕುಶಾಲನಗರದ(kushalanagar) ಕೋಟಿ ಚೆನ್ನಯ್ಯ(koti chennaiah) ಬಿಲ್ಲವ ಸಮಾಜ ವತಿಯಿಂದ ಏಪ್ರಿಲ್‌ ೨೬, ೨೭ರಂದು ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮುದಾಯ ಬಾಂಧವರ ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾವಳಿ ಏರ್ಪಡಿಸಲಾಗಿದೆ. ಆ ಪ್ರಯುಕ್ತ ಪಂದ್ಯಾವಳಿಯ ಲೋಗೋ(Logo) ಬಿಡುಗಡೆ ಕಾರ್ಯಕ್ರಮ ಬೈಚನಹಳ್ಳಿಯ ಮುತ್ತಪ್ಪ ದೇವಾಲಯ ಆವರಣದಲ್ಲಿ ನಡೆಯಿತು. ಸಂಘದ ಗೌರವಾಧ್ಯಕ್ಷ ಬಿ.ಟಿ. ರಮೇಶ್‌, ಅಧ್ಯಕ್ಷ ಸುಧೀರ್‌ ಲೋಗೋ ಬಿಡುಗಡೆಗೊಳಿಸಿದರು. ಪಂದ್ಯಾವಳಿ ಯಶಸ್ಸಿಗೆ ಸಮುದಾಯದ ತಂಡಗಳು, ಬಾಂಧವರು ಸಕಲ ರೀತಿಯಲ್ಲಿ ಕೈಜೋಡಿಸುವಂತೆ ಕೋರಿದರು.

ಸುಂಟಿಕೊಪ್ಪದಲ್ಲಿ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವರ ತೆರೆ – ಮಾ. 22ರಿಂದ ಹಲವು ಕಾರ್ಯಕ್ರಮ

ಸುಂಟಿಕೊಪ್ಪ : ಇಲ್ಲಿನ ಶ್ರೀ ಚಾಮುಂಡೇಶ್ವರಿ(Chamundeshwari) ಮತ್ತು ಶ್ರೀ ಮುತ್ತಪ್ಪ(Mutthappa) ದೇವಸ್ಥಾನ ಸಮಿತಿಯ ಆಶ್ರಯದಲ್ಲಿ  22-03-2025 ರಿಂದ 24-03-2025ರವರೆಗೆ 57ನೇ ವರ್ಷದ ತೆರೆ ಮಹೋತ್ಸವ ಏರ್ಪಡಿಸಲಾಗಿದೆ. 22-03-2025 ರಂದು ಬೆಳಗ್ಗೆ 6.30 ಗಂಟೆಗೆ ಶ್ರೀ ಗಣಪತಿ ಹವನ, 7.15 ಗಂಟೆಗೆ ಶುದ್ಧಿ ಪುಣ್ಯಾಹ ಪೂಜೆ ನೆರವೇರಲಿದೆ ಮತ್ತು 7.30 ಗಂಟೆಗೆ ಬಾವುಟ ಏರಿಸಲಾಗುವುದು. ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, 6 ಗಂಟೆಗೆ ಚಂಡೆ ಮೇಳ ಮತ್ತು ರಾತ್ರಿ 7 ಗಂಟೆಗೆ ಶ್ರೀ […]

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರಿಗೆ ಬಿಸಿ ಮುಟ್ಟಿಸಿದ ನ್ಯಾಯಾಲಯ – ಕೋರ್ಟ್‌ ವಿಧಿಸಿದ ದಂಡವೆಷ್ಟು ಗೊತ್ತಾ..?

ಕುಶಾಲನಗರ : ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ(Drunk and Drive) ಅಂತ ಸರ್ಕಾರ, ಪೊಲೀಸ್‌ ಇಲಾಖೆ ಅದೆಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಜನ ಮಾತ್ರ ಜಾಗೃತರಾಗುವಂತೆ ಕಾಣುತ್ತಿಲ್ಲ. ಪ್ರತಿ ದಿನ ಡ್ರಿಂಕ್‌ ಅಂಡ್‌ ಡ್ರೈವ್‌ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತದೆ. ಇದೀಗ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ(court) ದಂಡ ವಿಧಿಸಿ ಬಿಸಿಮುಟ್ಟಿಸಿದೆ. ದಿನಾಂಕ 18/03/2025 ರಂದು ಕುಶಾಲನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪ ಗೇಟ್ ಬಳಿ ತಪಾಸಣೆ ವೇಳೆ ಕಿರಣ್, ಗಣೇಶ್ ಎಚ್.ಆರ್, ಶಂಭು, ಕುಮಾರ, […]

ವಿವಿಧತೆಯಲ್ಲಿ ಏಕತೆ ಘೋಷವಾಕ್ಯದೊಂದಿಗೆ ಶ್ರೀ ಕೋದಂಡ ರಾಮೋತ್ಸವ : ಉತ್ಸವದ ಸಿದ್ಧತೆಯಲ್ಲಿ ಉತ್ಸಾಹಿ ಮಹಿಳಾ ಸಮಿತಿ..!

ಮಡಿಕೇರಿ : ಮಡಿಕೇರಿಯ ಶ್ರೀ ಮಲ್ಲಿಕಾರ್ಜುನ ಬಡಾವಣೆಯಲ್ಲಿರುವ ಶ್ರೀ ಕೋದಂಡರಾಮ(kodanda rama) ದೇವಾಲಯದ ರಾಮೋತ್ಸವ ಸಮಿತಿಯ ವತಿಯಿಂದ ಈ ಬಾರಿ ವಿವಿಧತೆಯಲ್ಲಿ ಏಕತೆ ಎಂಬ ಘೋಷವಾಕ್ಯದೊಂದಿಗೆ ೩೫ನೇ ವರ್ಷದ ರಾಮನವಮಿಯ ರಾಮೋತ್ಸವ ಹಾಗೂ ದೇವಾಲಯದ ದ್ವಿತೀಯ ವರ್ಷದ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶ್ರೀ ಕೋದಂಡ ರಾಮೋತ್ಸವ ಮಹಿಳಾ ಸಮಿತಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ(womens) ಸಮಿತಿಯ ಅಧ್ಯಕ್ಷೆ ಭಾರತಿ ರಮೇಶ್, ಏ.೫ ಮತ್ತು ೬ ರಂದು ನಡೆಯುವ ರಾಮೋತ್ಸವ ಕುರಿತು ಮಾಹಿತಿ ನೀಡಿದರು. ಎಲ್ಲಾ […]

ಕೊಡಗು ಜಮ್ಮಾಮಲೆ ಅಸೋಸಿಯೇಷನ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ – ಮಲೆ ಹಿಡುವಳಿದಾರರ ಸಮಸ್ಯೆ ಬಗೆಹರಿಕೆಗೆ ಮನವಿ ಸಲ್ಲಿಕೆ…

ಬೆಂಗಳೂರು : ಕೊಡಗು ಜಮ್ಮಾಮಲೆ ಅಸೋಸಿಯೇಷನ್ ನೇತೃತ್ವದ ನಿಯೋಗ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮೀಸಲು ಅರಣ್ಯದಲ್ಲಿರುವ ಮಲೆ ಹಿಡುವಳಿದಾರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಸಮ್ಮುಖದಲ್ಲಿ  ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ನಿಯೋಗ ದಶಕಗಳಿಂದ ಈ ಭಾಗದ ಜನರನ್ನು ಕಾಡುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಗಮನಸೆಳೆಯಿತು. ಮಾನವ-ಪ್ರಾಣಿ ಸಂಘರ್ಷಕ್ಕೆ ಅಂತ್ಯ ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಈ ಸಂಬಂಧ  ಕೊಡಗು ಜಮ್ಮಾಮಲೆ […]

ಮಾ.27 ಮತ್ತು 28 ರಂದು ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ದೈವಕೋಲ

ಮಡಿಕೇರಿ : ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಮಾ.27 ಮತ್ತು 28 ರಂದು ದೈವಕೋಲ ಜರುಗಲಿದೆ. ಎರಡು ದಿನ ಕಾಲ ದೇವಾಲಯದಲ್ಲಿ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ಜರುಗಲಿದ್ದು, ಮಾ.27ರ ರಾತ್ರಿ 7 ಗಂಟೆಯಿಂದ ಮಾ.28ರ ಅಪರಾಹ್ನದವರೆಗೆ ಶ್ರೀ ವಿಷ್ಣುಮೂರ್ತಿ, ರಕ್ತೇಶ್ವರಿ, ಕುಟ್ಟಿಶಾಸ್ತಾನ್, ಉಚ್ಚಿಟ್ಟ ವೀರನ್ ಗುಳಿಗನ್, ಭೂತಂ, ಪಾಷಾಣಮೂರ್ತಿ ಮತ್ತು ಅಜ್ಜಪ್ಪ ತೆರೆ ನಡೆಯಲಿದೆ. ಮಾ.28 ರಂದು ರಾತ್ರಿ ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದ್ದು, ಮಾ.28ರ ಬೆಳಿಗ್ಗೆ 5 ಗಂಟೆಗೆ […]