ಮಡಿಕೇರಿಯಲ್ಲಿ ರಾಮೋತ್ಸವಕ್ಕೆ ತಯಾರಿ – ಕೋದಂಡರಾಮ ದೇವಾಲಯದಲ್ಲಿ ಪೂರ್ವಭಾವಿ ಸಭೆ…

ಮಡಿಕೇರಿ : ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ರಾಮೋತ್ಸವ ಆಡಳಿತ ಮಂಡಳಿ ವತಿಯಿಂದ ಏ.5 ಮತ್ತು 6 ರಂದು ನಡೆಯಲಿರುವ ರಾಮೋತ್ಸವದ ಪೂರ್ವಭಾವಿ ಸಭೆ ದೇವಾಲಯದಲ್ಲಿ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಉಪಸಮಿತಿಗಳ ಪದಾಧಿಕಾರಿಗಳೊಡನೆ ಚರ್ಚಿಸಲಾಯಿತು. ರಾಮೋತ್ಸವದ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ, ದೇಣಿಗೆ ಸಂಗ್ರಹ, ಅನ್ನದಾನಕ್ಕೆ ದಾನಿಗಳಿಂದ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಲು ತೀರ್ಮಾನಿಸಲಾಯಿತು. ಸಮಿತಿ ಅಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಈಗಾಗಲೇ ರಾಮೋತ್ಸವದ ಸಿದ್ಧತೆಗಳು ಆರಂಭವಾಗಿದ್ದು, ಎಲ್ಲಾ ಸಮಿತಿಗಳು […]
GPL- ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಕ್ರಿಕೆಟ್ ಕಲರವ ಏಪ್ರಿಲ್ 20ರಿಂದ – 10 ಫ್ರಾಂಚೈಸಿ ತಂಡಗಳು ಭಾಗಿ

ಮಡಿಕೇರಿ : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.೨೦ ರಿಂದ ಮೇ ೪ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ “ಜಿಪಿಎಲ್-ಗೌಡ ಪ್ರೀಮಿಯರ್ ಲೀಗ್” ಲೆದರ್ ಬಾಲ್ ಟಿ-೨೦ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಕೊಡಗು ಗೌಡ ಯುವ ವೇದಿಕೆ ಶಿಸ್ತು ಸಮಿತಿ ಅಧ್ಯಕ್ಷ ನವೀನ್ ದೇರಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಗೌಡ ಯುವ ವೇದಿಕೆ ಕಳೆದ ಹಲವಾರು ವರ್ಷಗಳಿಂದ ಗೌಡ ಜನಾಂಗ ಬಾಂಧವರಿಗೆ ಕ್ರೀಡಾಕೂಟ ಮತ್ತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು […]
ಡೈರೆಕ್ಟರ್ ಕ್ಯಾಪ್ ತೊಟ್ಟ ನಟಿ ಹರ್ಷಿಕಾ ಪೂಣಚ್ಚ – ಚಿ. ಸೌಜನ್ಯ ಪೋಸ್ಟರ್ ಬಿಡುಗಡೆ ಮಾಡಿದ ಕೊಡಗಿನ ಕುವರಿ… ಮೊದಲ ನಿರ್ದೇಶನದಲ್ಲೇ ಸಖತ್ ಸದ್ದು ಮಾಡಿದ ಹರ್ಷಿಕಾ..!

ಮಡಿಕೇರಿ : ರಾಜ್ಯದಲ್ಲಿ ಈಗ ಧರ್ಮಸ್ಥಳದ ಸೌಜನ್ಯ ಪ್ರಕರಣ ಸದ್ದು ಮಾಡುತ್ತಿದೆ. ದೌರ್ಜನ್ಯಕ್ಕೊಳಗಾಗಿ ಪ್ರಾಣ ಕಳೆದುಕೊಂಡ ಯುವತಿಗೆ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಕೂಡಾ ನಡೆಯುತ್ತಿದೆ. ಈ ನಡುವೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಚಿ. ಸೌಜನ್ಯ ಎಂಬ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತಾಯ್ತನದ ಸಂಭ್ರಮದಲ್ಲಿದ್ದ ಹರ್ಷಿಕಾ ಪೂಣಚ್ಚ ಮತ್ತೆ ಫೀಲ್ಡ್ಗೆ ರೀ ಎಂಟ್ರಿಯಾಗಿದ್ದಾರೆ. ಅದು ಕೂಡಾ ಡೈರೆಕ್ಟರ್ ಕ್ಯಾಪ್ ತೊಡುವ ಮೂಲಕ. ಮೊದಲ ಬಾರಿಗೆ ಡೈರೆಕ್ಷನ್ಗೆ […]