ಕಾವೇರಿ ಕಾಲೇಜಿನಲ್ಲಿ ನಡೆದ ಹಾಕಿ ತೀರ್ಪುಗಾರರ ಕಾರ್ಯಾಗಾರ ಸಮಾರೋಪ

ವಿರಾಜಪೇಟೆ ಕಾವೇರಿ ಕಾಲೇಜು, ಕೊಡವ ಹಾಕಿ ಅಕಾಡೆಮಿ ಹಾಗೂ ಹಾಕಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಕಾವೇರಿ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಗುರುವಿರ ನಡೆದ ಹಾಕಿ ತೀರ್ಪುಗಾರರ ಕಾರ್ಯಗಾರದ (Hockey Referee Workshop) ಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೋಮವಾರಪೇಟೆ ತಾಲೂಕು ಕೊಡವ ಹಾಕಿ ((Hockey) ಮಿಯ ಕಾರ್ಯನಿರತ ಉಪಾಧ್ಯಕ್ಷರಾದ ಕುಕ್ಕೆರ ಜಯ ಚಿನ್ನಪ್ಪ ಮಾತನಾಡಿ, ನಮ್ಮ ಕಾಲದ ಹಾಕಿ ಆಟಕ್ಕೂ ,ಈ ಕಾಲದ ಹಾಕಿಯ ಆಟಕ್ಕೂ ಬಹಳ ಬದಲಾವಣೆಯಾಗಿದೆ. ಈ ರೀತಿಯ ಕಾರ್ಯಗಾರಗಳು ನಡೆದಂತಹ ಸಂದರ್ಭದಲ್ಲಿ […]
SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಖಾಸಗಿ ಬಸ್ ಸೇವೆ

ವಿದ್ಯಾರ್ಥಿಗಳು ಎಸ್.ಎಸ್. ಎಲ್. ಸಿ. ಪರೀಕ್ಷೆ (SSLC Exam) ಮುಗಿಸಿ ಮನೆಗೆ ಹಿಂತಿರುಗಲು ಅನುಕೂಲವಾಗುವ ಸದುದ್ದೇಶದಿಂದ ಖಾಸಗಿ ಬಸ್ ಮಾಲೀಕರೊಬ್ಬರು ತನ್ನ ಒಡೆತನದ ಬಸ್ ಅನ್ನು ಒದಗಿಸುವ ಮೂಲಕ ಪೋಷಕರ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಯಲಕ್ಷ್ಮಿ ಬಸ್ ಮಾಲಿಕರಾದ ಕಾಡೇಮಾಡ ಗೌತಮ್ ಅವರು ತಮ್ಮ ಖಾಸಗಿ ಬಸ್ ಅನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿ ಜನಮೆಚ್ಚುಗೆಗೆ ಪಾತ್ರರಾದವರಾಗಿದ್ದಾರೆ. ಪೊನ್ನಂಪೇಟೆ ತಾಲೂಕು ತಿತಿಮತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿ ಪರೀಕ್ಷೆ ಬರೆದ ನಂತರ ಬಾಳೆಲೆ, ಪೊನ್ನಪಸಂತೆ, […]
ಹೋಂ ಸ್ಟೇ ನೋಂದಣಿ ಮಾಡಿಕೊಳ್ಳಲು ಅವಕಾಶ – ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು […]
ಬಿಳಿಗೇರಿಯಲ್ಲಿ 35ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ – ಹಲವು ಕ್ರೀಡಾ ಸ್ಪರ್ಧೆ ಆಯೋಜನೆ…

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ರ್ವತ್ತೋಕ್ಲು, ಬಿಳಿಗೇರಿ ಮತ್ತು ಕುಂಬಳದಾಳು ಪೆರಾತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ೩೫ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಏ.೬ ರಂದು ಬಿಳಿಗೇರಿ ಗ್ರಾಮದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ ಪೆರಾತ ಯುವಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ […]
ಸ್ತನ ಹಿಡಿಯುವುದು, ಪೈಜಾಮದ ದಾರ ಎಳೆಯುವುದು ಅತ್ಯಾಚಾರದ ಅಪರಾಧವನ್ನ ಎಂದ ನ್ಯಾಯಾಲಯ..!

ಬೆಂಗಳೂರು : ಸ್ತನಗಳನ್ನು ಹಿಡಿಯುವುದು, ಪೈಜಾಮಾದ ದಾರವನ್ನು ಹಿಡಿದು ಎಳೆಯುವುದು ಮತ್ತು ಓಡಿಹೋಗುವ ಮುನ್ನ ಸಂತ್ರಸ್ತೆಯನ್ನು ಮೋರಿಗೆ ಎಳೆದೊಯ್ಯಲು ಪ್ರಯತ್ನ ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನದ ಅಪರಾಧ ಆಗುವುದಿಲ್ಲವೆಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಆರೋಪಿಗಳಾದ ಪವನ್ ಮತ್ತು ಆಕಾಶ್ ಎನ್ನುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ(pocso) ಕಾಯ್ದೆಯ ಸೆಕ್ಷನ್ 18ರ (ಅಪರಾಧ ಎಸಗಲು ಯತ್ನಿಸಿದ್ದಕ್ಕೆ ಶಿಕ್ಷೆ) ಅಡಿಯಲ್ಲಿ ಸಮನ್ಸ್ ಜಾರಿಗೊಳಿಸಲಾಗಿತ್ತು. ಅವರ ವಿರುದ್ಧದ ಆರೋಪಗಳನ್ನು ಹೈಕೋರ್ಟ್ […]
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬ

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜನಪದ ಹಬ್ಬವನ್ನು (Folklore festival) ಇತ್ತೀಚೆಗೆ ಆಚರಿಸಲಾಯಿತು. ನಗರದ ಹಿರಿಯ ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ ಅವರು ಉದ್ಫಾಟಿಸಿ ಮಾತನಾಡಿ, ಕೊಡಗು ತನ್ನದೇ ಆದ ಜಾನಪದ ಶ್ರೀಮತಿಕೆ ಹೊಂದಿದ್ದು, ತನ್ನದೇ ಆದ ಹೆಸರು ಗಳಿಸಿದೆ. ಕರ್ನಾಟಕದ ಜಾನಪದ ಪರಂಪರೆಯನ್ನು ಕೋಲಾಟ, ಕಂಸಾಳೆ, ಯಕ್ಷಗಾನ, ಡೊಳ್ಳುಕುಣಿತ, ಸುಗ್ಗಿಕುಣಿತ ಮುಂತಾದ ಜಾನಪದ ಕಲ್ಲು, ರಾಗಿಕಲ್ಲು, ರಾಡೆ ಇವೆಲ್ಲ ಮಾಯವಾಗಿದೆ. ಅವುಗಳ ಸ್ಥಾನದಲ್ಲಿ ಆಧುನಿಕ ವಸ್ತುಗಳು ಸ್ಥಾನ ಪಡೆದುಕೊಂಡಿದೆ. ಜನಪದದಲ್ಲಿ ಮನುಷ್ಯ ಪ್ರೀತಿ, ಸಮಾಜದ […]
ಯುಗಾದಿ ಪ್ರಯುಕ್ತ AI ತಂತ್ರಜ್ಞಾನದ ಸ್ಯಾಮ್ಸಂಗ್ ಟಿವಿಗಳ ಮೇಲೆ ಬಂಪರ್ ಆಫರ್

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್ಸಂಗ್ ಕಂಪನಿಯು ಯುಗಾದಿ ಹಬ್ಬ ಸಂಭ್ರಮದ ಸಲುವಾಗಿ ತನ್ನ ಪ್ರೀಮಿಯಂ ಎಐ ದೊಡ್ಡ ಸ್ಕ್ರೀನ್ ಟಿವಿಗಳಾದ ನಿಯೋ ಕ್ಯೂಎಲ್ಇಡಿ 8 ಕೆ, ನಿಯೋ ಕ್ಯೂಎಲ್ಇಡಿ 4 ಕೆ, ಓಎಲ್ಇಡಿ ಮತ್ತು ಕ್ರಿಸ್ಟಲ್ 4 ಕೆ ಯುಎಚ್ಡಿ ಟಿವಿ ಮಾಡೆಲ್ ಗಳ ಮೇಲೆ ವಿಶೇಷ ಆಫರ್ ಗಳನ್ನು ಘೋಷಿಸಿದೆ. ಮಾರ್ಚ್ 5 ರಿಂದ ಮಾರ್ಚ್ 31, 2025 ರವರೆಗೆ ನಡೆಯುವ ಈ ಹಬ್ಬದ ಅಭಿಯಾನವು ಗ್ರಾಹಕರಿಗೆ ತಮ್ಮ ಮನೆಯ […]