ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಕೊಡಗಿನ ಪ್ರತೀಕ್ಷಾ ರಾಜ್ಯಕ್ಕೆ 6ನೇ ಸ್ಥಾನ

2nd puc result

ಮಡಿಕೇರಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯ ಮೂಲದ ವಿದ್ಯಾರ್ಥಿನಿ ರಾಜ್ಯಕ್ಕೆ 6ನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಕುಶಾಲನಗರದ ಪ್ರತೀಕ್ಷಾ (Pratheeksha) ಎಸ್ 594/600 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾರೆ. ಬೆಳ್ತಂಗಡಿಯ ಎಕ್ಸೆಲ್ ಪಿ.ಯು. ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಈಕೆ ಕುಶಾಲನಗರದ ಶಿಕ್ಷಕಿ ಭವ್ಯ & ಮಾಜಿ ಸೈನಿಕ ಸುಧೀರ್ ಕುಮಾರ್ ಅವರ ಪುತ್ರಿ. ಇಂಗ್ಲೀಷ್‌‌ನಲ್ಲಿ 98, ಸಂಸ್ಕೃತ 100, ಭೌತಶಾಸ್ತ್ರ 100, ರಸಾಯನಶಾಸ್ತ್ರ 96, ಲೆಕ್ಕಶಾಸ್ತ್ರ 100, ಜೀವಶಾಸ್ತ್ರದಲ್ಲಿ 100 […]

ವಾಹನ ಸವಾರರೇ ಗಮನಿಸಿ: ಕೊಡಗಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

Vehicle traffic banned

ಮಡಿಕೇರಿ (Madikeri) ಕುಟ್ಟ ಹೆದ್ದಾರಿ ಸಂ-89ರ ಕಿ.ಮೀ. 80.40 ರಲ್ಲಿನ (ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಭಾಗದಲ್ಲಿ ಮಳೆಹಾನಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಏಪ್ರಿಲ್, 08 ರಿಂದ ಮೇ, 10 ರವರೆಗೆ ಪೊನ್ನಂಪೇಟೆ ತಾಲ್ಲೂಕು ಮಡಿಕೇರಿ ಕುಟ್ಟ ಹೆದ್ದಾರಿ ಸಂ.89ರ ಕಿ.ಮೀ.80.40 ರಲ್ಲಿನ(ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ (Vehicle) ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕೊಡಗು ಜಿಲ್ಲೆಗೆ ಯಾರು ಟಾಪರ್ಸ್? ಇಲ್ಲಿದೆ ವಿವರ

2nd PUC Result

2024–25 ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ 83.84 ರಷ್ಟು ಫಲಿತಾಂಶ ದಾಖಲಿಸಿದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ 4 ನೇ ಸ್ಥಾನ ಗಳಿಸಿದೆ. 2024 ರ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯು 5 ಸ್ಥಾನದಿಂದ 4 ನೇ ಸ್ಥಾನವನ್ನು ಪಡೆದಿದೆ. ಜಿಲ್ಲೆಯಲ್ಲಿ 4697 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3938 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಕುಳಿತಿದ್ದ 2,320 ಬಾಲಕರಲ್ಲಿ 1750 ಬಾಲಕರು ಉತ್ತೀರ್ಣರಾಗಿ 75.43 ರಷ್ಟು ಫಲಿತಾಂಶ ಪಡೆದಿದ್ದಾರೆ. […]

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡಲು ಇಲ್ಲಿದೆ ಟಿಪ್ಸ್

childrens Away from Smartphones

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎನ್ನುವುದು ಪ್ರತಿಯೊಬ್ಬ ಪೋಷಕರ ಕನಸು . ತಮ್ಮ ಮಕ್ಕಳು ಮುಂದೆ ಜೀವನದಲ್ಲಿ ಉತ್ತಮ ನಾಗರಿಕರಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಹೀಗಾಗಿ ಅವರಿಗೆ ನಾವು ಒಳ್ಳೆಯದನ್ನೇ ಕಲಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಪ್ರಸ್ತುತ ಮೊಬೈಲ್ ಬಳಕೆ ಚಟವಾಗಿ ಮಾರ್ಪಟ್ಟಿದೆ. ಹಲವು ಪೋಷಕರು ದಿನವಿಡೀ ಸ್ಮಾರ್ಟ್‌ಫೋನ್‌ (Smartphones) ಬಳಕೆಯಲ್ಲಿ ನಿರತರಾಗಿರುತ್ತಾರೆ. ಕುಟುಂಬ ಮತ್ತು ಮಕ್ಕಳೊಂದಿಗೆ ಕೆಲಸ ಸಮಯವನ್ನು ಕಳೆಯುವ ಬದಲು, ಮೊಬೈಲ್ ಒಂದು ಅಭ್ಯಾಸವಾಗಿದೆ. ಇದನ್ನು ನೋಡಿ ಮಕ್ಕಳು ಸಹ ಫೋನ್‌ಗಳ ಕೆಟ್ಟ […]

2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

2nd PUC Result

ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್​​ಸೈಟ್​ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದರೆ ಕೊಡಗು ಜಿಲ್ಲೆ 4ನೇ ಸ್ಥಾನ (ಶೇ.83.84) ಹಾಗೂ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. karresults.nic.in ಹಾಗೂ […]

ಕೊಡಗಿನ ಮಾದರಿ ಗ್ರಾಮಕ್ಕೆ ಅಂಡಮಾನ್‌, ನಿಕೋಬಾರ್‌ ದ್ವೀಪದ ಅಧಿಕಾರಿಗಳ ಭೇಟಿ – ಅಭಿವೃದ್ಧಿ ಬಗ್ಗೆ ಅಧ್ಯಯನ..!

ಮೂರ್ನಾಡು : ಒಂದು ಪ್ರದೇಶದ ಅಭಿವೃದ್ಧಿಯ ಅಧ್ಯಯನ ಸಂಬಂಧ ಬೇರೆ ಬೇರೆ ಕಡೆಯ ತಂಡಗಳು ಬಂದು ಪರಿಶೀಲನೆ ಮಾಡುತ್ತವೆ. ಅದೇ ರೀತಿ ಕೊಡಗಿನ ಮಾದರಿ ಗ್ರಾಮ ಪಂಚಾಯಿತಿಯೊಂದಕ್ಕೆ ಅಂಡಮಾನ್‌ ನಿಕೋಬಾರ್‌ ದ್ವೀಪದ ಪ್ರತಿನಿಧಿಗಳು ಭೇಟಿ ನೀಡಿ ಮಾಹಿತಿ ಪಡೆದು ತೆರಳಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿಗೆ ಅಂಡಮಾನ್ ನಿಕೋಬಾರ್ ದ್ವೀಪ ಸಮೂಹಗಳ ಪಂಚಾಯತ್ ರಾಜ್ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭೇಟಿ ನೀಡಿದರು.  ಪಂಚಾಯಿತ ವ್ಯಾಪ್ತಿಯ ವಿವಿಧ ರೀತಿಯ ಅಭಿವೃದ್ಧಿ ಬಗ್ಗೆ ಇಲ್ಲಿನ […]

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ – ರೌಡಿಶೀಟರ್‌ ಹಾಕುವ ಬೆದರಿಕೆವೊಡ್ಡಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು..!

ಮಡಿಕೇರಿ : ವಿನಯ್ ಸೋಮಯ್ಯ(vinay somaiah) ಮತ್ತು ವಿಷ್ಣು ನಾಚಪ್ಪ) ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಸಿಬ್ಬಂದಿ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಮೃತ ವಿನಯ್ ಸೋಮಯ್ಯ ಸಹೋದರ ಜೀವನ್ ಮಾಜಿ ಸಂಸದ ಪ್ರತಾಪ್ ಸಿಂಹ(pratap simha), ಮಾಜಿ ಶಾಸಕ ಕೆ.ಜಿ ಬೋಪಯ್ಯ(kg bopaiah), ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಭಾರತೀಶ್, ರಾಬಿನ್ ದೇವಯ್ಯ ಹಾಗೂ ಪ್ರಮುಖ ಮುಖಂಡರು ಈ ಸಂದರ್ಭ ಇದ್ದರು.

ಪ್ರತಿಭಾನ್ವಿತ ಕ್ರೀಡಾಪಟುಗಳ ವಿಶೇಷ ಆಯ್ಕೆ ಶಿಬಿರ

Athletes

ಪ್ರಸಕ್ತ(2025-26) ಸಾಲಿಗೆ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ 8 ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿಗೆ ಈಗಾಗಲೇ ಆಯ್ಕೆ ಪ್ರಕ್ರಿಯೆ ಮಾಡಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದೆ ಅವಕಾಶ ವಂಚಿತರಾದ ಪ್ರತಿಭಾನ್ವಿತ ಕ್ರೀಡಾಪಟುಗಳ (athletes) ಆಯ್ಕೆಯನ್ನು ಏಪ್ರಿಲ್, 15 ರಂದು ಹಾಕಿ ಮೈಸೂರು ಚಾಮುಂಡಿ ವಿಹಾರ ಕ್ರೀಡಾಂಗಣ, ಜಿಮ್ನಾಸ್ಟಿಕ್ಸ್ ತುಮುಕೂರು ಜಿಲ್ಲಾ ಕ್ರೀಡಾಂಗಣದಲ್ಲಿ, ಫುಟ್ಬಾಲ್ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಏಪ್ರಿಲ್, 17 ರಂದು ಅಥ್ಲೆಟಿಕ್ಸ್, ಬಾಸ್ಕೇಟ್ ಬಾಲ್, ವಾಲಿಬಾಲ್ ಮತ್ತು ಕಬಡ್ಡಿ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ […]

ನೂತನ ಎಎಸ್‌ಪಿಯಾಗಿ ಬಾರಿಕೆ ದಿನೇಶ್ ಕುಮಾರ್ ನೇಮಕ

Barike Dinesh Kumar

ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ (ASP) ಸುಂದರರಾಜ್ ರವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೊಡಗು ಮೂಲದ ಬಾರಿಕೆ ದಿನೇಶ್ ಕುಮಾರ್ (Dinesh Kumar) ನೇಮಕ. 2 ವರ್ಷಗಳ ಹಿಂದೆ ಡಿ ವೈ ಎಸ್ ಪಿ ಆಗಿ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.