ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವು ನಡೆಯಿತು. ಶಾಲಾ (School) ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ಅವರು ಮಾತನಾಡಿ ಶಾಲೆಯಲ್ಲಿ ಸಿಗುವ ಉಚಿತ ಸೌಲಭ್ಯ ಹಾಗೂ ಸರ್ಕಾರದ ವತಿಯಿಂದ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಲೆಯಲ್ಲಿನ ಸೌಲಭ್ಯಗಳು ನುರಿತ ಶಿಕ್ಷಕರು, ಸುಸಜ್ಜಿತ ನವೀನ ಕಟ್ಟಡ, ಸುಸಜ್ಜಿತ ಪೀಠೋಪಕರಣಗಳು, ಅನುಭವಾತ್ಮಕ ಕಲಿಕೆ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಉತ್ತಮ ವಿಜ್ಞಾನ, ಗಣಿತ, ಸಮಾಜ ಸಮಾಜ ವಿಜ್ಞಾನ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, […]
ಸಿಇಟಿ ಪರೀಕ್ಷೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಇದೇ ಏಪ್ರಿಲ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಿಇಟಿ (CET) ಪರೀಕ್ಷೆ ಸಿದ್ಧತೆ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬಂಧ ಸರ್ಕಾರದ […]
ಪತ್ರಕರ್ತರ ಸಂಘದಿಂದ ಏಪ್ರಿಲ್ 11ರಂದು ಸುಂಟಿಕೊಪ್ಪದಲ್ಲಿ ಮಾಧ್ಯಮ ಸಂವಾದ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಏ.೧೧ರ ಶುಕ್ರವಾರ ಬೆಳಗ್ಗೆ ೧೦.೩೦ ಗಂಟೆಗೆ ಸುಂಟಿಕೊಪ್ಪದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಸಂವಾದದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಭಾರ ಉಪ ತಹಶೀಲ್ದಾರ್ ಎನ್.ಆರ್. ಪ್ರಶಾಂತ್, ಸುಂಟಿಕೊಪ್ಪ ಗ್ರಾಮ […]
ಮಡಿಕೇರಿಯಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಮತ್ತು ದಲಿತರ ಹಣ ಲೂಟಿ ಈ ಮೂರು ವಿಚಾರವನ್ನು ಇಟ್ಟುಕೊಂಡು, ಕರ್ನಾಟಕ ಬಿಜೆಪಿ ಘಟಕ ನಾಲ್ಕು ಹಂತಗಳ ಜನಾಕ್ರೋಶ ಯಾತ್ರೆಯನ್ನು (Janakrosh Yatra) ಮೈಸೂರಿನಲ್ಲಿ ಆರಂಭಿಸಿತು. ಇಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ ದಿನೇ ದಿನೇ ಒಂದಿಲ್ಲೊಂದು ಬೆಲೆ ಏರಿಕೆ ಮಾಡುವುದನ್ನು ವಿರೋಧಿಸಿ ಪ್ರತಿಭಟಿಸಿದರು. ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ರಾಜ್ಯದ ಅಭಿವೃದ್ಧಿ ಶೂನ್ಯ ದುರಾಡಳಿತ, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಅಲ್ಪಸಂಖ್ಯಾತರ ಹೆಸರಿನಲ್ಲಿ […]
ನಾಲ್ನಾಡ್ ಹಾಕಿ ಕ್ಲಬ್ ಬಲ್ಲಮಾವಟಿ : ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನ…

ನಾಪೋಕ್ಲು : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬಲ್ಲಮಾವಟಿ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನಗೊಂಡಿತು. ಶಿಬಿರದ ಸಮಾರೋಪ ಸಮಾರಂಭ ಹಿರಿಯರ ಸಮ್ಮುಖದಲ್ಲಿ ಜರುಗಿತು. ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ, ಅಪ್ಪಚೆಟ್ಟೋಳಂಡ ರವಿ ಮೊಣ್ಣಪ್ಪ, ಕೈಬಿಲಿರ ಟಿಪ್ಪು ಚಂಗಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಪೂಣಚ್ಚ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಉಚಿತ ಟಿ […]
ವಾಟರ್ ಬಾಟಲಿ ನೀರು ಅಸುರಕ್ಷಿತ! ಹೊರಬಿತ್ತು ಭಯಾನಕ ಸತ್ಯ… ಕೊಡಗಿನ ಬ್ರ್ಯಾಂಡ್ ಹೆಸರು ಸಹ ಬಹಿರಂಗ

ನಾವು ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳ ಬಯಲಾದ ಬೆನ್ನಲ್ಲೇ ಕುಡಿಯುವ ನೀರಿನ (water) ಬಾಟಲಿಯ ಬಹಳಷ್ಟು ಬ್ರ್ಯಾಂಡ್ಗಳು ಅಸುರಕ್ಷಿತ ಎಂಬ ಶಾಕ್ ಸುದ್ದಿಯನ್ನು ಸರಕಾರವೇ ನೀಡಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯದ ವಿವಿಧೆಡೆ ಬಾಟಲಿ ಕುಡಿಯುವ ನೀರಿನ 255 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದೆ. ಸಾಕಷ್ಟು ಕಂಪನಿಗಳ ವಾಟರ್ ಬಾಟಲ್ (Water Bottle) ಅಸುರಕ್ಷಿತ ಮತ್ತು ಕಳಪೆ ಗುಣಮಟ್ಟದಿಂದ ಕೂಡಿರುವುದು ಸಾಬೀತಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ […]