Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಮೂರ್ನಾಡು (Murnad) 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಏಪ್ರಿಲ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮುದ್ದಂಡ ಕಪ್ ಹಾಕಿ ನಮ್ಮೆ: ಮಹಿಳೆಯರ ಹಾಕಿ ಆಟದ ಜೋಶ್ ಏಪ್ರಿಲ್ 21ರಿಂದ – ಪ್ರಶಸ್ತಿಗಾಗಿ ಸೆಣಸಲಿವೆ 56 ತಂಡಗಳು..!

ಮಡಿಕೇರಿ : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.೨೧ ರಿಂದ ಮಹಿಳೆಯರ ೫ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. ಮುದ್ದಂಡ ಹಾಕಿ (Muddanda Hockey) ಉತ್ಸವದ ಮೈದಾನದಲ್ಲಿ ಬೆಳಿಗ್ಗೆ ೯ ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ […]
ಜಾತಿ ಗಣತಿ ವರದಿಗೆ ಕೊಡಗು ಒಕ್ಕಲಿಗರ ಸಂಘ ವಿರೋಧ – ನನ್ನ ಮನೆಗೆ ಯಾವುದೇ ಸಮೀಕ್ಷಾ ತಂಡ ಬಂದಿಲ್ಲ ಎಂದ ಪ್ರಮುಖರು..!

ಮಡಿಕೇರಿ : ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಕೊಡಗು ಜಿಲ್ಲಾ ಒಕ್ಕಲಿಗರ (Kodagu Vokkaliga) ಸಂಘ ಹಾಗೂ ತಾಲ್ಲೂಕು ಸಂಘಗಳು ತೀವ್ರವಾಗಿ ವಿರೋಧಿಸಿವೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರುಗಳು ಸಚಿವ ಸಂಪುಟದಲ್ಲಿ ಮಂಡನೆಯಾದ ವರದಿ ಅವೈಜ್ಞಾನಿಕ ಸಮೀಕ್ಷೆಯಿಂದ […]
ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ […]
ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

ಇತ್ತೀಚೆಗೆ ಹೊಸ ಹೊಸ ಫೀಚರ್ಸ್ಗಳನ್ನು ಹೊಂದಿರುವ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಬರುತ್ತಿದೆ. ಆದರೆ ಈ ಹೊಸ ಸ್ಮಾರ್ಟ್ಫೋನ್ (Smartphone) ಖರೀದಿಸಲು ಕೆಲವರಿಗೆ ಬಜೆಟ್ ಇರಲ್ಲ. ಸ್ಮಾರ್ಟ್ಫೋನ್ಗಳ ಬೆಲೆಗಳು ಏರಿಕೆಯಾಗುವುದರಿಂದ ಜನರು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ಗಳನ್ನು ಖರೀದಿಸುವ ಬಗ್ಗೆ ಯೋಚಿಸುತ್ತಿದ್ದಾರೆ. ಆದರೆ ಸೆಕೆಂಡ್ ಹ್ಯಾಂಡ್ ಫೋನ್ ಖರೀದಿಸುವ ಮೊದಲು ಪರಿಗಣಿಸಬೇಕಾದ ಕೆಲವು ಅಂಶಗಳ ಬಗ್ಗೆ ಮಾಹಿತಿ ಇಲ್ಲಿದೆ. * ನೀವು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಬಗ್ಗೆ ಯೋಚಿಸಿದಾಗ, ಅರ್ಧ ಬೆಲೆಗೆ ಹೊಸ ಸ್ಮಾರ್ಟ್ಫೋನ್ ಖರೀದಿಸಲು ಆತುರಪಡಬೇಡಿ. ಎಲ್ಲಾ ಟೆಕ್ನಿಕಲ್ […]