Power Cut… ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 13 ದೇವನೂರು ಫೀಡರ್‍ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ದೇವನೂರು, ಮಲ್ಲೂರು, ಕಿಸ್ತೂರು, ರಾಜಪುರ, ಬೆಟ್ಟತ್ತೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಸುಳುಗೋಡು, ಬಾಳೆಲೆ, ಜಾಗಲೆ, ನಿಟ್ಟೂರು, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಸಾಧಕ-ಬಾಧಕ ಸಂವಾದ ಕಾರ್ಯಕ್ರಮ

Kodagu University

ಮಡಿಕೇರಿ: ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ (Kodagu University) ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ರಾಜ್ಯದಲ್ಲಿ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ […]

ಕಾವೇರಿ ಕಾಲೇಜಿನಲ್ಲಿ ಏಡ್ಸ್ ಕುರಿತ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Awareness program

ಏಡ್ಸ್ (AIDS) ಎಂಬುದು ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು ನಾವು ಇಡುವಂತಹ ತಪ್ಪು ಹೆಜ್ಜೆಯ ಮೂಲಕ ಗುಣವಾಗಲಾರದಂತಹ ಈ ಮಾರಕ ಕಾಯಿಲೆಗೆ ಬಲಿಯಾಗಬೇಕಾಗುತ್ತದೆ ಎಂದು ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು. ಕೊಡಗು ಜಿಲ್ಲೆ ಏಡ್ಸ್ ನಿಯಂತ್ರಣ ಘಟಕ ಹಾಗೂ ಕಾವೇರಿ ಕಾಲೇಜಿನ ಎನ್ಎಸ್ಎಸ್ ಮತ್ತು ರೆಡ್ ರಿಬ್ಬನ್ ಘಟಕದ ವತಿಯಿಂದ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಏಡ್ಸ್ ಕುರಿತ ಜಾಗೃತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನ ಅಜಾಗರುವುಕತೆ ಹಾಗೂ […]

ಸಹಾಯವಾಣಿ ಆರಂಭಿಸಿ ಸರ್ಕಾರ: ಜಮ್ಮು ಕಾಶ್ಮೀರ ಪ್ರವಾಸ ತೆರಳಿರುವ ವಿವರ ಇಲ್ಲಿ ಹಂಚಿಕೊಳ್ಳಿ

Kashmir

ಕಾಶ್ಮೀರದ ಪಹಲ್‍ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ (Kashmir) ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಫರೇಟರ್ಸ್ ಮತ್ತು ಟ್ರಾವಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ (Helpline) ನೀಡಬೇಕೆಂದು ಕೋರಿದೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ 080-43344334, […]

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Horticulture training

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ (Horticulture) ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 28 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ […]

ಮಿಜೋರಾಂ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡ ಟೊಯೋಟಾ

Toyota

ಬೆಂಗಳೂರು: ಈಶಾನ್ಯ ಭಾರತದಲ್ಲಿ ಸಮಗ್ರ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಸಾಗುತ್ತಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇದೀಗ ಆ ರಾಜ್ಯದಲ್ಲಿನ ಸಮಗ್ರ ಸಮುದಾಯ ಅಭಿವೃದ್ಧಿಗೆ ಮಿಜೋರಾಂ ಸರ್ಕಾರದ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಮಿಜೋರಾಂನ ಐಜಾಲ್‌ ನಲ್ಲಿ ಎಂಓಯು ವಿನಿಮಯ ಸಮಾರಂಭವು ನಡೆದಿದ್ದು, ಇದು ಸಮುದಾಯ ಕೇಂದ್ರಿತ ಸಿಎಸ್ಆರ್ ಯೋಜನೆಗಳ ಮೂಲಕ ಈ ಪ್ರದೇಶದ ಪ್ರಗತಿಗೆ ಕೊಡುಗೆ ನೀಡುತ್ತಿರುವ ಟಿಕೆಎಂನ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಈ ಸಹಭಾಗಿತ್ವದ ಅಡಿಯಲ್ಲಿ ಟಿಕೆಎಂ […]

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪ್ರತೀಕಾರದ ಭರವಸೆ ನೀಡಿದ ಅಮಿತ್‌ ಶಾ

Amit Shah

ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕಳೆಬರಹಗಳಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್‌ ಶಾ ನಂತರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು […]

ತೆರಾಲು ಬಳಿ ಹುಲಿ ಸೆರೆಹಿಡಿಯುವ ಕಾರ್ಯಾಚರಣೆ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ

Tiger capture operation

ಕೊಡಗು ಜಿಲ್ಲೆಯ ಬಿರುನಾಣಿ ಗ್ರಾ.ಪಂ.ವ್ಯಾಪ್ತಿಯ ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ‘ಹುಲಿ (Tiger) ಹಿಡಿಯುವ ಕಾರ್ಯಾಚರಣೆ’ ಸ್ಥಳಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು. ಹುಲಿ ಸೆರೆಹಿಡಿಯುವ ಕಾರ್ಯಚರಣೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸುದೀರ್ಘ ಚರ್ಚಿಸಿದರು. ತೆರಾಲು, ಟಿ.ಶೆಟ್ಟಿಗೇರಿ, ಶ್ರೀಮಂಗಲ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹುಲಿಯು ಆಗಾಗ ಕಾಣಿಸಿಕೊಳ್ಳುತ್ತಿದ್ದು, […]

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಅಣಬೆ ಬೇಸಾಯದ ಕುರಿತು ಕಾರ್ಯಗಾರ

Workshop on mushroom cultivation

ವಿರಾಜಪೇಟೆ ಕಾವೇರಿ ಕಾಲೇಜು (Cauvery College) ಹಾಗೂ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ಅಣಬೆ (Mushroom) ಬೇಸಾಯದ ಕುರಿತ ಪ್ರಯೋಗಾತ್ಮಕವಾದ ಕಾರ್ಯಗಾರವು (Workshop) ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಮಂಗಳವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಬಡತನದಲ್ಲಿ ಹುಟ್ಟೋದು ನಮ್ಮ ತಪ್ಪಲ್ಲ ಆದರೆ ಬಡವರಾಗಿ ಸಾಯುವುದು ನಮ್ಮ ತಪ್ಪು. ಪ್ರತಿಯೊಬ್ಬ ಮನುಷ್ಯ ಸಾಧಿಸುವ ಚಲವಿದ್ದರೆ ಹಲವಾರು ಅವಕಾಶಗಳಿವೆ . ಆರ್ಥಿಕ […]