ಮುದ್ದಂಡ ಹಾಕಿ ಉತ್ಸವ: ಮಹಿಳಾ ಕ್ವಾಟರ್ ಫೈನಲ್-ಸೆಮಿ ಫೈನಲ್ ಪಂದ್ಯಾವಳಿಯ ವಿಜೇತರ ವಿವರ

ಕ್ವಾಟರ್ ಫೈನಲ್: ಕಾಂಡಂಡ ಮತ್ತು ಕೇಚೆಟ್ಟಿರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕೇಚೆಟ್ಟಿರ ಜಯ ಸಾಧಿಸಿತು. ಕೇಚೆಟ್ಟಿರ ಪರ ತೇಜಸ್ವಿ 2 ಹಾಗೂ ಲಕ್ಷ್ಯ 1 ಗೋಲು ದಾಖಲಿಸಿದರು. ಕಾಂಡಂಡ ನೇಹಾ ಅಪ್ಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.ಕುಟ್ಟಂಡ (ಮಾದಾಪುರ) ಮತ್ತು ಕುಪ್ಪಂಡ (ಕೈಕೇರಿ) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 2-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಜಯ ಸಾಧಿಸಿತು. ಕುಟ್ಟಂಡ ಚುಪ್ಪಿ ಕಾರ್ಯಪ್ಪ […]
ಬೆಂಗಳೂರಿನಲ್ಲಿ ಕಪಿಲ್ ದೇವ್-ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಪ್ರಾರಂಭ

ಬೆಂಗಳೂರು: ಕಪಿಲ್ ದೇವ್- ಗ್ರಾಂಟ್ ಥಾರ್ನ್ಟನ್ ಇನ್ವಿಟೇಷನಲ್ 2025 ಇಂದು ಬೆಂಗಳೂರಿನ (Bengaluru) ಪ್ರತಿಷ್ಠಿತ ಪ್ರೆಸ್ಟೀಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಪ್ರಾರಂಭವಾಯಿತು. ಮೊಟ್ಟಮೊದಲ ಬಾರಿಗೆ ಭಾರತದ ಮುಂಚೂಣಿಯ ಪುರುಷ ಹಾಗೂ ಮಹಿಳಾ ವೃತ್ತಿಪರರು ಪರಸ್ಪರ ರೂ.2 ಕೋಟಿಗಳ ಬಹುಮಾನಕ್ಕೆ ಹಣಾಹಣಿ ನಡೆಸಲಿದ್ದು ಈ ಕ್ರೀಡೆಗೆ ಮಹತ್ತರ ಕ್ಷಣವಾಗಿಸಿದೆ. ಖ್ಯಾತ ಕ್ರಿಕೆಟ್ ಪಟು ಕಪಿಲ್ ದೇವ್ (Kapil Dev) ಮತ್ತು ಪ್ರೀಮಿಯಂ ಕನ್ಸಲ್ಟಿಂಗ್ ಸಂಸ್ಥೆ ಗ್ರಾಂಟ್ ಥಾರ್ನ್ಟನ್ ಭಾರತ್ ಜಂಟಿಯಾಗಿ ಪ್ರಸ್ತುತಪಡಿಸುತ್ತಿರುವ ಈ ಟೂರ್ನಮೆಂಟ್ ಅನ್ನು ಪ್ರೊಫೆಷನಲ್ […]
ಮಡಿಕೇರಿಯಲ್ಲಿ ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ

ಮಡಿಕೇರಿ:- ಚಲನಚಿತ್ರ ಬರೀ ಮನರಂಜನೆಯಲ್ಲ. ಅದೊಂದು ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆ ತರುವ ಮಾಧ್ಯಮವಾಗಿದೆ. ಆ ನಿಟ್ಟಿನಲ್ಲಿ ಡಾ.ರಾಜ್ಕುಮಾರ್ (Dr.Rajkumar) ಅವರು ಕನ್ನಡ ನಾಡಿನ ಚಲನಚಿತ್ರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಕನ್ನಡಿಗರ ಕಣ್ಮಣಿಯಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ […]
ಹಿರಿಯ ರಾಜಕಾರಣಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಇನ್ನು ನೆನಪು ಮಾತ್ರ

ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ (Bottolanda Mitoo Chengappa) ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ […]
Jammu and Kashmir: ಭಾರತೀಯ ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ… ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಭಾರತೀಯ ಸೇನೆ ಮುಂದಾಗಿದೆ. ಇದೀಗ ಭಯೋತ್ಪಾದಕರನ್ನು ಸದೆಬಡೆಯಲು ಕಾಲ ಕೂಡಿ ಬಂದಿದೆ. ಇಂದು ಉಧಂಪೂರ್ ಬಳಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪಿನ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ (Soldier) ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ (ಏ.24) ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ […]
ಲಾವಣ್ಯ ಬೋರ್ಕರ್ ಗೆ ಡಾ. ಬಿ.ಆರ್.ಅಂಬೇಡ್ಕರ್ ಸದ್ಭಾವನಾ ಪ್ರಶಸ್ತಿ

ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕರ್ ರವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ (Dr. B. R. Ambedkar) ಸದ್ಭಾವನಾ ರಾಷ್ಟ್ರ ಮಟ್ಟದ ಪ್ರಶಸ್ತಿಗೆ (Award) ಭಾಜನರಾಗಿದ್ದಾರೆ. ಅವರು ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ )ಸಂಸ್ಥೆಯ ವತಿಯಿಂದ ಮೈಸೂರಿನ ಸಾಹಸಸಿಂಹ ಸಭಾಂಗಣ ಡಾ.ವಿಷ್ಣು ವರ್ಧನ್ ಸ್ಮಾರಕ ಭವನದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ವಿವಿಧ ಸಾಧಕರುಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ […]