ಪ್ರಾದೇಶಿಕ ಅಸಮತೋಲನ ನಿವಾರಣೆ ಬಗ್ಗೆ ಸುದೀರ್ಘ ಸಂವಾದ

regional imbalances

ಪ್ರಾದೇಶಿಕ ಅಸಮತೋಲನ (Regional imbalances) ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ […]

ಪಶ್ಚಿಮಘಟ್ಟ ಉಳಿಸಿಕೊಳ್ಳಲು ವರದಿ ಸಲ್ಲಿಸಿದ್ದ ಕೆ ಕಸ್ತೂರಿರಂಗನ್ ನಿಧನ

Kasturirangan

ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ (Kasturirangan) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ಬಾಹ್ಯಾಕಾಶ ವಿಜ್ಞಾನಿಯಾಗಿದ್ದ ಅವರು, ಭಾರತೀಯ ಭಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಬರೋಬ್ಬರಿ 9 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1994 ರಿಂದ ಆಗಸ್ಟ್ 27, 2003ವರೆಗೆ ಇಸ್ರೋದ ಅಧ್ಯಕ್ಷರಾಗಿದ್ದರು. ರಾಜ್ಯಸಭೆ ಸದಸ್ಯ, ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಕೆ.ಕಸ್ತೂರಿ ರಂಗನ್ ಅವರ ಸಾಧನೆಗೆ ಭಾರತ ಸರ್ಕಾರ, ದೇಶದ […]

ಮಿಟ್ಟು ಚಂಗಪ್ಪ ಅಂತಿಮ ದರ್ಶನಕ್ಕೆ ಆಗಮಿಸಿದ ಸಚಿವರಾದ ಕೆ. ಜೆ. ಜಾರ್ಜ್, ಎನ್. ಎಸ್. ಬೋಸರಾಜ್

Mitoo Chengappa

ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದರು. ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಿನ್ನೆ ನಿಧನರಾದ ಮಿಟ್ಟು ಚಂಗಪ್ಪ(Mitoo Chengappa) ಅಂತಿಮ ದರ್ಶನಕ್ಕೆ ಸಚಿವರಾದ ಕೆ. ಜೆ. ಜಾರ್ಜ್ ಹಾಗೂ ಎನ್. ಎಸ್. ಬೋಸರಾಜ್ ಹೆಲಿಕಾಪ್ಟರ್ ಮೂಲಕ ಮಡಿಕೇರಿಗೆ ಆಗಮಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 1 ಗಂಟೆವರೆಗೆ ಮಡಿಕೇರಿ […]

ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್‌ವಾಟರ್ನಿಂದ ವಿಚಾರ ಸಂಕಿರಣ

Bengaluru’s Water Crisis

ಬೆಂಗಳೂರು: ಎಸ್ಟಿಪಿ ನೀರನ್ನು ಉತ್ತಮ ಗುಣಮಟ್ಟದ ಕುಡಿಯುವ ನೀರಾಗಿ ಪರಿವರ್ತಿಸುವ ವಾಟರ್ ಯುಟಿಲಿಟಿ ಕಂಪನಿ ಬೋಸನ್ ವೈಟ್ ವಾಟರ್, ಏಪ್ರಿಲ್ 16ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಾಯಿ ವಿಶ್ರಾಮ್ನಲ್ಲಿ “ಸುಸ್ಥಿರ ನೀರಿನ ನಿರ್ವಹಣಾ ಅಭ್ಯಾಸಗಳು” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಅಪಾರ್ಟ್ಮೆಂಟ್ ಸಂಘಗಳು, ನೀರಿನ ಟ್ಯಾಂಕರ್ ನಿರ್ವಾಹಕರು ಮತ್ತು ಸಂಸ್ಕರಿಸಿದ ನೀರಿನ ಕೈಗಾರಿಕಾ ಖರೀದಿದಾರರು ವರ್ತುಲ ಜಲ ನಿರ್ವಹಣೆಯ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಜತೆಗೆ ಬೆಂಗಳೂರಿನ (Bengaluru) ನೀರಿನ ಬಿಕ್ಕಟ್ಟನ್ನು ಪರಿಹರಿಸಲು […]