ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ… ಶಿಕ್ಷಣ ವ್ಯಕ್ತಿಗಳನ್ನು ದೇಶದ ಸಂಪತ್ತನ್ನಾಗಿ ಪರಿವರ್ತಿಸಬೇಕು: ಯು.ಟಿ.ಖಾದರ್

ಮಡಿಕೇರಿ : ಶಿಕ್ಷಣದ ಗುರಿ ಕೇವಲ ಅಂಕಗಳಿಗೆ, ರ್ಯಾಂಕ್ ಗಳಿಕೆಗೆ ಸಿಮೀತವಾಗಬಾರದು. ಅದರ ಜೊತೆಯಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಅಮೂಲ್ಯ ಸಂಪತ್ತಾಗಿ ಪರಿವರ್ತನೆಯಾಗಬೇಕು. ಈ ರೀತಿಯ ಮಾರ್ಪಾಡು ಮಾಡುವವರು ಮತ್ತು ಹೊಂದುವವರು ನಿಜವಾದ ದೇಶಪ್ರೇಮಿಗಳು ಎಂದು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ […]
ಚೇಲಾವರದ ಕೊರಗಜ್ಜ ದೈವ ಸನ್ನಿದಿಯಲ್ಲಿ ದ್ವಿತೀಯ ವರ್ಷದ ನೇಮೋತ್ಸವ

ಚೆಯ್ಯಂಡಾಣೆಯ ಚೇಲವಾರ ಗ್ರಾಮದ ಸ್ವಾಮಿ ಕೊರಗಜ್ಜ(Koragajja) ಸನ್ನಿಧಿಯಲ್ಲಿ ಮೇ. 3 ಹಾಗೂ 4 ರಂದು ದ್ವಿತೀಯ ವರ್ಷದ ನೇಮೋತ್ಸವ ನಡೆಯಲಿದೆ. 03/05/2025, ಶನಿವಾರ ಬೆಳಿಗ್ಗೆ 07.00 ಗಂಟೆಗೆ ಗಣಪತಿ ಪೂಜೆ, ಸಂಜೆ 05.00 ಗಂಟೆಗೆ ದೈವಗಳ ಭಂಡಾರ ತೆಗೆಯುವುದು, ಸಂಜೆ 06.00 ಗಂಟೆಗೆ ಮಂತ್ರವಾದಿ ಗುಳಿಗ ದೈವದ ಕೋಲ, ರಾತ್ರಿ 09.00 ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ರಾತ್ರಿ 10.30 ಗಂಟೆಗೆ ಪಾಷಾಣಮೂರ್ತಿ ದೈವದ ಕೋಲ, ರಾತ್ರಿ 02.00 ಗಂಟೆಗೆ ಮಯೊಂತಿ ದೈವದ ಕೋಲ, 04/05/2025, ಭಾನುವಾರ ಬೆಳಿಗ್ಗೆ […]