ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

first degree class

2025 ನೇ ಸಾಲಿನ ಜೂನ್/ ಜುಲೈನಲ್ಲಿ ನಡೆಯಲಿರುವ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಹಾಗೂ 6 ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಂಡಶುಲ್ಕ ರಹಿತ ಮೇ, 05 ಹಾಗೂ ದಂಡ ಶುಲ್ಕದೊಂದಿಗೆ ಮೇ, 12 ಕೊನೆಯ ದಿನವಾಗಿದೆ. ಹಾಗೆಯೇ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿಯು (Admissions) ಆರಂಭವಾಗಿರುತ್ತದೆ. ಪ್ರವೇಶಾತಿ ಬಯಸುವವರು ಕಾಲೇಜನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಕೊಡಗಿನಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಸಹಾಯವಾಣಿ ಕೇಂದ್ರ ಆರಂಭ

Helpline center for electricity problems

ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ (Electricity) ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ. […]

ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ಕೆಎಂಎ ಖಂಡನೆ

KMA

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ (Pahalgam) ಬೈಸರಾನ್ ವ್ಯಾಲಿಯಲ್ಲಿ ಏ. 22ರಂದು ನಡೆದ ಉಗ್ರರ ದಾಳಿ ತೀವ್ರ ಖಂಡನೀಯ. ಈ ದಾಳಿಯಲ್ಲಿ ನಮ್ಮ ಕರ್ನಾಟಕ ರಾಜ್ಯದ ಮೂರು ಸೇರಿದಂತೆ ಒಟ್ಟು 26 ಮಂದಿ ಅಮಾಯಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಎಲ್ಲರಿಗೂ ಸಂತಾಪಗಳು. ಹೃದಯವಿದ್ರಾವಕವಾದ ಉಗ್ರರ ಈ ದಾಳಿ ಮಾನವೀಯತೆಗೆ ಕಳಂಕವಾಗಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (KMA) ಖಂಡನೆ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. […]

ಕೊಡಗು ಪೊಲೀಸ್ ಶ್ವಾನ ಪೃಥ್ವಿ ಇನ್ನಿಲ್ಲ

police dog

ಕೊಡಗು ಪೊಲೀಸ್‌ ಇಲಾಖೆಯ ಶ್ವಾನ ಪೃಥ್ವಿ (Prithvi) ಹೃದಯಾಘಾತದಿಂದ ಮೃತಪಟ್ಟಿದೆ. 6 ತಿಂಗಳು ಬೆಂಗಳೂರಿನಲ್ಲಿ ತರಬೇತಿ ಪಡೆದ ಪೃಥ್ವಿ ತದನಂತರ ಕೊಡಗು ಜಿಲ್ಲೆಗೆ ನಿಯೋಜನೆಗೊಂಡಿದ್ದು, ಸುಮಾರು 500ಕ್ಕೂ ಹೆಚ್ಚು ವಿಐಪಿ/ ವಿವಿಐಪಿ ಸುರಕ್ಷತಾ ಕರ್ತವ್ಯಗಳಲ್ಲಿ ಭಾಗಿಯಾಗಿತ್ತು. ಗೋವಾ ಮತ್ತು ಪಾಂಡಿಚೇರಿಗಳಲ್ಲಿ ಪ್ರಧಾನ ಮಂತ್ರಿ ಕರ್ತವ್ಯ ನಿಮಿತ ಭಾಗಿಯಾಗಿದೆ. ದಕ್ಷಿಣ ವಲಯ ಮತ್ತು ಪೊಲೀಸ್ ಕರ್ತವ್ಯ ಕೋಟಗಳಲ್ಲಿ ಪದಕ ಗಳಿಸಿದ ಕೀರ್ತಿ ಪೃಥ್ವಿ ಸಲ್ಲುತ್ತದೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ: ಮೇ 05 ರಿಂದ ಸಮಗ್ರ ಸಮೀಕ್ಷೆ

Internal Reservation

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (Internal Reservation) ವರ್ಗೀಕರಣ ಕುರಿತು ಮೇ, 05 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ […]