ಕೊಡಗಿನಲ್ಲಿ ತಮ್ಮನಿಗೆ ಗುಂಡಿಟ್ಟು ಕೊಂದ ಅಣ್ಣ: ಕಾರಣ ಏನು ಗೊತ್ತಾ?

kodagu

ಅಣ್ಣ-ತಮ್ಮನ ನಡುವೆ ಆಸ್ತಿಗಾಗಿ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಚೆಟ್ಟಳ್ಳಿ ಬಳಿಯ ಅಭ್ಯತ್ ಮಂಗಲದಲ್ಲಿ ನಡೆದಿದೆ. ಕೊಳಂಬೆ(Kolambe) ವಿನು ಬೆಳ್ಯಪ್ಪ(53) ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಸಹೋದರ ಮಣಿ ಹಿಂದಿನಿಂದ ಬಂದು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಇಂದು ಬೆಳಿಗ್ಗೆ 11:45 ರ ಸುಮಾರಿಗೆ ಸುಬ್ಬಯ್ಯ ತನ್ನ ಮನೆಯಿಂದ ತನ್ನ SBBL ಬಂದೂಕನ್ನು ತೆಗೆದುಕೊಂಡು […]

ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

Kannada Sahitya Parishat

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ ಸಂಸ್ಥಾಪನಾ ದಿನವು ಮಂಗಳವಾರ ನಡೆಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ‘ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಕನ್ನಡ ಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

Power Cut

ಮೂರ್ನಾಡು 33/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್4 ಮರಗೋಡು ಫೀಡರ್‍ನಲ್ಲಿ ಮೇ, 07 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಐಕೊಳ, ಕಟ್ಟೆಮಾಡು, ಮರಗೋಡು, ಹುಲಿತಾಳ, ಹೊಸ್ಕೇರಿ, ಅರೆಕಾಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮತ್ತೆ ಜೈಲಿಗೆ ʼಗಣಿ ಧಣಿʼ ಶಾಸಕ ಜನಾರ್ದನ ರೆಡ್ಡಿ – ಕಾರಣ ಏನು ಗೊತ್ತಾ..?

Janardhana Reddy

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಾಲಿ ಶಾಸಕ ಜನಾರ್ಧನ ರೆಡ್ಡಿ (Janardhana Reddy) ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದ್ದು, 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಹೈದರಾಬಾದ್‌ನ ನಾಮಪಲ್ಲಿಯಲ್ಲಿರುವ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ್ದು, ಗಣಿ ಧಣಿಗೆ ಮತ್ತೆ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬಂದೊದಗಿದೆ. ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, […]

ಶನಿವಾರಸಂತೆ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

shanivarasante

ಶನಿವಾರಸಂತೆ (Shanivarasante) ಹೋಬಳಿಯ ಚೌಡೇನಹಳ್ಳಿ ರಸ್ತೆ ಮಧ್ಯೆ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದೆ. ಶನಿವಾರಸಂತೆ ಬಳಿಯ ನಿತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡೇನ ಹಳ್ಳಿ ಗ್ರಾಮದ ಚಂದನ್ ( 25) ಮೃತ ದುರ್ದೈವಿ. ಮೃತ ಚಂದನ್ ಹಾಗೂ ಆತನ ಸ್ನೇಹಿತ ಶನಿವಾರಸಂತೆಯಿಂದ ಚೌಡೇನಗಳ್ಳಿಗೆ ಬೈಕ್ ನಲ್ಲಿ ಸೋಮವಾರ ಸಂಜೆ ಹಿಂದಿರುಗುತ್ತಿದ್ದಾಗ ಅಪರಿಚಿತ ಕಾರು ಬಂದು ಡಿಕ್ಕಿ ಹೊಡೆದ್ದರಿಂದ ಈ ಅಪಘಾತ ಸಂಭವಿಸಿದೆ. ಎಂದು ವರದಿಯಾಗಿದೆ. ಈ ಪ್ರಕರಣದ ಬಗ್ಗೆ […]

ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು: ಗುಂಡೇಟಿಗೆ ವ್ಯಕ್ತಿ ಬಲಿ

kodagu news

ವ್ಯಕ್ತಿಯೊಬ್ಬರು ಗುಂಡೇಟಿಗೆ ಬಲಿಯಾದ ಘಟನೆ ಕೊಡಗಿನ (kodagu) ಸಿದ್ದಾಪುರ ಸಮೀಪದ ಅಭ್ಯತ್ ಮಂಗಲದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಕೊಳಂಬೆ ವಿನು ಬೆಳ್ಯಪ್ಪ ಎಂಬುವವರೇ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು ಅವರು ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಹಿಂಬದಿಯಿಂದ ಗುಂಡು ಹಾರಿಸಿರುವ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಆಸ್ತಿ ವೈಶಮ್ಯ ಘಟನೆಗೆ ಕಾರಣ ಎಂದು […]