ಕೆ.ಎಂ.ಎ. ವತಿಯಿಂದ ಕುಪ್ಪಂದಿರ ಕೆ.ಯೂಸುಫ್ ಹಾಜಿಗೆ ಬೀಳ್ಕೊಡುಗೆ

KMA

ಪ್ರಪಂಚದಾದ್ಯಂತದ ವೈವಿಧ್ಯಮಯ ಭಾಷೆಗಳ, ವಿವಿಧ ವರ್ಣಗಳ ಮತ್ತು ವಿವಿಧ ಆರ್ಥಿಕ ವರ್ಗಗಳ ಜನರು ಒಟ್ಟು ಸೇರುವ ಪವಿತ್ರ ಹಜ್ ಯಾತ್ರೆಯು ಯಾತ್ರಾರ್ಥಿಗಳಲ್ಲಿ ಏಕತೆ ಮತ್ತು ಸಮಾನತೆಯ ಭಾವನೆ ಮೂಡಿಸುತ್ತದೆ. ಒಂದೇ ಸಮಯದಲ್ಲಿ ಮತ್ತು ಒಂದೇ ಸ್ಥಳದಲ್ಲಿ ಒಬ್ಬನೇ ಸರ್ವಶಕ್ತನನ್ನು ಆರಾಧಿಸುವ ಈ ಹಜ್ಜ್ ನಿರ್ವಹಣೆ ವಿಶ್ವಾಸಿಗಳ ಜೀವನದ ಬಹುದೊಡ್ಡ ಆಧ್ಯಾತ್ಮಿಕ ಅನುಭವವಾಗಿದೆ. ಆಧ್ಯಾತ್ಮಿಕ ಉತ್ಕರ್ಷ, ಸಮಾನತೆ, ಸಹೋದರತೆಗಳನ್ನು ಬೆಳೆಸಿ ಮುಂದಿನ ಕೆಡುಕು ರಹಿತ ಬದುಕು ಮತ್ತು ಆತ್ಮ ಪರಿಶುದ್ಧತೆಯನ್ನು ಏಕೀಕರಿಸುವುದರಲ್ಲಿ ಹಜ್ಜ್ ಬಹು ದೊಡ್ಡ ಪಾತ್ರ ವಹಿಸುತ್ತದೆ […]

ಜಲಜೀವನ್ ಮಿಷನ್ ಯೋಜನೆ ಜೂನ್ ಅಂತ್ಯದೊಳಗೆ ಪ್ರಗತಿ ಸಾಧಿಸಿ: ಯದುವೀರ್

Jaljeevan Mission

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸಂಸದರಾದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು […]