IPL 2025: ಐಪಿಎಲ್ ಟೂರ್ನಿ ರದ್ದು, ಯಾವಾಗ ನಡೆಯಲಿದೆ ದ್ವಿತೀಯಾರ್ಧ?

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್ ಪ್ರಿಮಿಯರ್ ಲೀಗ್ (IPL) 2025 ಪಂದ್ಯಾವಳಿಯನ್ನು ಬಿಸಿಸಿಐ ರದ್ದುಗೊಳಿಸಲಾಗಿದೆ. ಆಟಗಾರರು, ಪ್ರಾಂಚೈಸಿ, ಅಭಿಮಾನಿಗಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಇಂದು (ಮೇ 9) ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿಮ ಉದ್ವಿಗ್ನತೆ ಹೆಚ್ಚಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿರುವ ಒಟ್ಟು 9 ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಮೇಲೆ, ಉಭಯ […]
ನಾಳೆ ಕೊಡಗಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಕುಶಾಲನಗರ ಪುರಸಭೆ ವ್ಯಾಪ್ತಿಯ KSRTC ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ನ್ನು (Indira Canteeen) ಮೇ, 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರು ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.