ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ವಿಚಾರಣೆಗೆ ಹಾಜರಾದ ತೆನ್ನಿರ ಮೈನಾ

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಕೊಡಗು ಮೂಲದ ಬಿಜೆಇಪ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ (Thennira Maheena) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಹೆಣ್ಣೂರು ಪೊಲೀಸರು ನೊಟೀಸ್ ನೀಡಿದ್ದರು. ಅದರಂತೆ ಠಾಣೆಯ ಇನ್ಸ್ಪೆಕ್ಟರ್ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಕೊಡಗು ಮೂಲದ ವಿನಯ್ ಸೋಮಯ್ಯ ನವರು ಏಪ್ರಿಲ್ 4 ರಂದು ಮುಂಜಾನೆ ನಾಗವಾರದದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ […]
ಲೋಕ ಕಲ್ಯಾಣಕ್ಕಾಗಿ ಕೊಡಗಿನಲ್ಲಿ ಜಪಯಜ್ಞ – ಸಹಸ್ರ ಮೋದಕಗಳಿಂದ ಮಹಾಗಣಪತಿ ಹೋಮ

ಮಡಿಕೇರಿ : ಜೀವನದಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ೧೧ ರಿಂದ ಅತಿರುದ್ರ ಜಪಯಜ್ಞ ಆರಂಭಗೊಂಡಿದೆ. ಬೆಳಗ್ಗೆ ೬.೩೦ಕ್ಕೆ ಜಪಯಜ್ಞದೊಂದಿಗೆ ಧಾರ್ಮಿಕ ಕಾರ್ಯ ಆರಂಭವಾಗಿದ್ದು, ಬಳಿಕ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ. ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆಯುತ್ತಿದೆ. ಮೇ ೧೧ರಿಂದ ೨೧ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯದೆಲ್ಲೆಡೆಯಿಂದ ೫೦ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ […]
ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ಮಹಾಸಭೆ ಮೇ ೧೪ಕ್ಕೆ

ಮಡಿಕೇರಿ : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ ೧೪ ರಂದು ಮಡಿಕೇರಿಯಲ್ಲಿ(madikeri) ನಡೆಯಲಿದೆ. ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.