ಅತಿರುದ್ರ ಜಪಯಜ್ಞ ಮೇ 21ರಂದು ಕಣಿವೆಯ ಶ್ರೀರಾಮಲಿಂಗೇಶ್ವರದಲ್ಲಿ ಸಂಪನ್ನ: ಮೇ 20ರಂದು ಮಡಿಕೇರಿಯಲ್ಲಿ ರುದ್ರ ಹೋಮ

ಮಡಿಕೇರಿ : ಲೋಕ ಕಲ್ಯಾಣಕ್ಕಾಗಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಜಪಯಜ್ಞ ಸಮಿತಿ ವತಿಯಿಂದ ನಡೆಯುತ್ತಿರುವ ಅತಿರುದ್ರ ಜಪಯಜ್ಞ ಮೇ ೨೧ರಂದು ಕಾವೇರಿ ತೀರದಲ್ಲಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ಸನ್ನಿಧಿಯಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 21 ರಂದು ಶ್ರೀರಾಮಲಿಂಗೇಶ್ವರ ದೇವಾಲಯದಲ್ಲ್ಲಿ ಶ್ರೀ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜರ ನೇತೃತ್ವದಲ್ಲಿ ಶ್ರೀ ಚಂಡಿಕಾ ಹೋಮ, ಎರಡು ಆವರ್ತದ ಶ್ರೀರುದ್ರ ಜಪ ಹಾಗೂ ಮಹಾ ಪ್ರಸಾದ ವಿನಿಯೋಗ ನಡೆಯಲಿದೆ. ಮೇ 20 […]
ಅರೆಕಾಡು ಹೊಸ್ಕೇರಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಹೊಸ್ಕೇರಿ ರಸ್ತೆಯ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ (Dr.Mantar Gowda) ಅವರು ಭೂಮಿಪೂಜೆ ನೆರವೇರಿಸಿದರು.ಕಳೆದ ಕೆಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿತ್ತು. ಹೊಂಡ, ಗುಂಡಿಗಳಿAದ ಕೂಡಿದ್ದ ರಸ್ತೆಯ ಅಭಿವೃದ್ಧಿಗಾಗಿ ಇತ್ತೀಚೆಗೆ “ಕೊಡವ ವೆಲ್ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಷನ್” ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಅನುದಾನವನ್ನು ಮೀಸಲಿಟ್ಟು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಡಾ.ಮಂತರ್ ಗೌಡ ಅವರು […]
Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

ವಿರಾಜಪೇಟೆ (Virajpet) 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಅಮ್ಮತ್ತಿ ಹಾಗೂ ಎಫ್9 ಚಂಬೆಬೆಳ್ಳೂರು ಫೀಡರ್ನಲ್ಲಿ ಮೇ, 19 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಪೂರ್ವ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಅಮ್ಮತ್ತಿ, ಕಾರ್ಮಾಡು, ಬಿಳುಗುಂದ, ಕೊಂಡಂಗೇರಿ, ಹಾಲುಗುಂದ, ಕಣ್ಣಂಗಾಲ, ಒಂಟಿಯಂಗಡಿ, ಚೆಂಬೆಬೆಳ್ಳೂರು, ದೇವಣಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕೊಯನಾಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಿ: ಎ.ಎಸ್.ಪೊನ್ನಣ್ಣ

ಮಡಿಕೇರಿ:- ಕೊಯನಾಡು ಬಳಿ ಈಗಾಗಲೇ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಾಗದಲ್ಲಿ ಭೂಮಿಪೂಜೆ ನೆರವೇರಿಸಲು ದಿನಾಂಕ ನಿಗಧಿ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನಿರ್ದೇಶನ ನೀಡಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಮಾರ್ಚ್ ಅಂತ್ಯದ ವರೆಗಿನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ವಿರಾಜಪೇಟೆ ವಿಧಾನಸಭಾ […]