Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಮಡಿಕೇರಿ:- ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಮಾರ್ಗದಲ್ಲಿ ಮೇ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ […]

ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ತಂಡ ಭೇಟಿ

Central Parliamentary Standing Committee

ಮಡಿಕೇರಿ:- ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ (Standing Committee) ತಂಡದ ಸದಸ್ಯರು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಅವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು. ತಂಡದಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆ ಸದಸ್ಯರು ಇದ್ದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಗೌಡಂಡ ತಿಮ್ಮಯ್ಯ ಅವರು ಜನರಲ್ ತಿಮ್ಮಯ್ಯ ಅವರ ಜೀವನ ಚರಿತ್ರೆ ಕುರಿತು ಮಾಹಿತಿ ನೀಡಿದರು.

ಲೋಕಕಲ್ಯಾಣಕ್ಕಾಗಿ ಕಣಿವೆ ರಾಮನ ಸನ್ನಿಧಿಯಲ್ಲಿ ಕೋಟಿ ಜಪಯಜ್ಞ : ಶ್ರೀ ಶಾಂತಾನಂದ ಮಹಾರಾಜ್ ನೇತೃತ್ವ

koti Japa Yajna

ಮಡಿಕೇರಿ: ಕಣಿವೆಯ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಲೋಕ ಕಲ್ಯಾಣದ ಹಿತದೃಷ್ಟಿಯಿಂದ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜ್ ನೇತೃತ್ವದಲ್ಲಿ ಕೋಟಿಗೂ ಅಧಿಕ ರುದ್ರ ಜಪ ಪಾರಾಯಣ ಮಂಗಳವಾರ ರಾತ್ರಿಯಿಂದ ಬುಧವಾರ ಮಧ್ಯಾಹ್ನದವರೆಗೂ ಜರುಗಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಋತ್ವಿಕರು ನಿರಂತರವಾಗಿ ಜಪ ಪಾರಾಯಣ ಮಾಡುವ ಮೂಲಕ ಭಕ್ತಿ ಭಾವ ಮೆರೆದರು. ಇದರ ಅಂಗವಾಗಿ ದೇವಾಲಯದಲ್ಲಿ ಶ್ರೀ ರಾಮಲಿಂಗೇಶ್ವರ ದೇವರಿಗೆ ಬಗೆ ಬಗೆಯ ಪುಷ್ಪಗಳಿಂದ ವಿಶೇಷವಾದ ಅಲಂಕಾರ ಹಾಗೂ ಪೂಜೆ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ […]

ಹೃದಯಘಾತದಿಂದ ಕುಶಾಲನಗರದ ಯುವ ಅರಣ್ಯ ಅಧಿಕಾರಿ ನಿಧನ

Forest officer

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಹೃದಯ ಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಕಾಯಿಲೆ, ಸಾವುಗಳು ಹೆಚ್ಚಾಗಿವೆ. ಕೋವಿಡ್‌ ಬಳಿಕ ಈ ಬೆಳವಣಿಗೆ ಕಂಡುಬಂದಿದೆ. ಇದೀಗ ಕುಶಾಲನಗರ ಅರಣ್ಯ ವಲಯದ ಅಂದಗೋವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪವಲಯ ಅರಣ್ಯ ಅಧಿಕಾರಿ, ಟಿ. ಕೆ.ದಿನೇಶ್ (37) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.