ಕೊಡಗಿನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Kodagu

ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ, ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ […]

ಕೊಡಗಿನಲ್ಲಿ ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಆಟ ಆಡುವುದು ನಿರ್ಬಂಧ

Water Restriction

ಮಡಿಕೇರಿ:- ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ (water) ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

Kodagu rainfall

ಕೊಡಗು (Kodagu) ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 126.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 449.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 143.30 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 657.83 ಮಿ.ಮೀ, ಕಳೆದ ವರ್ಷ ಇದೇ […]

ಅಮ್ಮತ್ತಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾಗಿ ರೆ.ಫಾ.ಮದಲೈ ಮುತ್ತು ಅಧಿಕಾರ ಸ್ವೀಕಾರ

St. Anthony priest

ವಿರಾಜಪೇಟೆ: ಸಮೀಪದ ಅಮ್ಮತ್ತಿಯ (Ammatthi) ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈ ಮುತ್ತು ರವರು ರೆ. ಫಾ. ರೈಮಂಡ್ ರವರಿಂದ ಅಧಿಕಾರವನ್ನು ಸ್ವೀಕರಿಸಿದರು. ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಅಧಿಕಾರ ಸ್ವೀಕಾರದ ಧಾರ್ಮಿಕ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ರೆ. ಫಾ. ಮದಲೈ ಮುತ್ತು ರವರು ಕಳೆದ 22 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿಯೇ ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ […]