ಕೊಡಗಿನಲ್ಲಿ ಮಳೆ ಆರ್ಭಟ: ನಾನಾ ಅವಾಂತರ ಸೃಷ್ಟಿ, ಎಲ್ಲೆಲ್ಲಿ ಏನೇನಾಗಿದೆ?

ಅವಧಿಗೂ ಮುನ್ನವೇ ಕೊಡಗಿಗೆ (Kodagu) ಕಾಲಿಟ್ಟಿರುವ ಮುಂಗಾರು (Monsoon) ಮಳೆ ಆರಂಭದಲ್ಲೇ ಅವಾಂತರಗಳನ್ನು ಸೃಷ್ಟಿಸಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಹಲವೆಡೆಗಳಲ್ಲಿ ನೀರು ರಸ್ತೆ ಮೇಲೆ ನದಿಯಂತೆ ಹರಿದಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡು ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮಾಲ್ದಾರೆ ಸುತ್ತಮುತ್ತಲಿನಲ್ಲಿ ಸುರಿಯುತ್ತಿದ್ದ ಭಾರಿ ಗಾಳಿ ಮಳೆಗೆ ಮನೆಯಿಂದ ಹೊರ ಬರುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ […]
ಭಾರೀ ಮಳೆಯಿಂದಾಗಿ ಕೊಡಗಿನ ಅಂಗನವಾಡಿಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ, ಹೆಚ್ಚಿನ ಗಾಳಿ-ಮಳೆ ಮುಂದುವರೆದಿರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 28.05.2025 ರ ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ (Anganwadis) ರಜೆ ವಿಸ್ತರಿಸಿ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ನೀಡುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದಂತೆ ಜಿಲ್ಲಾಧಿಕಾರಿಗಳು, ಪ್ರಕಟಣೆ ಹೊರಡಿಸಿದ್ದಾರೆ.
ನಾಳೆ ಕೊಡಗು ವಿವಿಗೆ ಒಳಪಡುವ ಕಾಲೇಜುಗಳಿಗೆ ರಜೆ

ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಹಾಗೂ ಸಂಪರ್ಕ ಕಡಿತಗಳಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಇರುವ ಅಡೆತಡೆಗಳನ್ನು ಅವಲೋಕಿಸಿ ಹಾಗೂ ಕೊಡಗು (Kodagu) ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ, ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ದಿನಾಂಕ: 28-5-2025 ರಂದು ಒಂದು ದಿನದ ರಜೆ (Holiday) ಘೋಷಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಲ್ಲಿ ನಿಗದಿತವಾಗಿದ್ದ ಪ್ರಾಯೋಗಿಕ […]
ಮುಂಗಾರು ಆರಂಭ: ಜಿಲ್ಲಾಡಳಿತದ ಸಹಾಯವಾಣಿಗೆ ಮಾಹಿತಿ ನೀಡಿ

ಮಡಿಕೇರಿ:- ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು (Monsoon) ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ (Helpline) ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು […]
ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಚಿರತೆಯ ಪ್ರಾಣ ಉಳಿಸಿದ ರೋಚಕ ಘಟನೆ

ತಂತಿ ಬೇಲಿಗೆ ಸಿಲಿಕಿಕೊಂಡಿದ್ದ ಚಿರತೆಯನ್ನು (Leopard) ರಕ್ಷಿಸಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಮಾಳೇಟಿರ ಗೌತಮ್ ರವರ ಕಾಫಿ ತೋಟದಲ್ಲಿ ನಡೆದಿದೆ. ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇಂದು ಬೆಳಿಗ್ಗೆ ಆಹಾರ ಅರಸಿ ಬಂದಿದ್ದ ಚಿರತೆ ತೋಟದ ಬೇಲಿಯೊಳಗೆ ನುಸುಳಿ ತಂತಿಗಳ ನಡುವೆ ಬಂಧಿಯಾಗಿದೆ. ತಂತಿ ಬೇಲಿಯಿಂದ ಹೊರ ಬರಲಾಗದೇ ಜೀವ ಉಳಿಸಿಕೊಳ್ಳಲು ಶತ ಪ್ರಯತ್ನ ಪಡುತ್ತಿರುವುದನ್ನು ಗಮನಿಸಿದ ತೋಟದ ಮಾಲೀಕರಾದ ಮಾಳೇಟಿರ ಗೌತಮ್ ವನ್ಯಜೀವಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 76.82 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.45 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ (Rain) 526.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.85 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 82.55 ಮಿ.ಮೀ. ಕಳೆದ ವರ್ಷ ಇದೇ ದಿನ 2.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 740.38 ಮಿ.ಮೀ, ಕಳೆದ ವರ್ಷ […]