ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ 11 ಸಾವು: ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಐಪಿಎಲ್ 2025ರ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), […]
ಕೂಡಲೇ ಅರ್ಜಿ ಸಲ್ಲಿಸಿ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 08 ಅತಿಥಿ ಶಿಕ್ಷಕರ (Guest Teacher) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 10 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್. ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು […]
‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ:-ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ […]
ತೆರೆದ ವಾಹನದಲ್ಲಿ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ: ಯಾಕೆ ಗೊತ್ತಾ?

ಐಪಿಎಲ್ -2025ನಲ್ಲಿ ಕಪ್ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಆರ್ಸಿಬಿ ತಂಡ ವಿಕ್ಟರಿ ಪರೇಡ್ ಇಂದು ನಡೆಸುವ ಸಾಧ್ಯತೆ ಇತ್ತು. ಆದರೆ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲವೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಹೇಳಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಆರ್ಸಿಬಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಆರ್ಸಿಬಿ ತಂಡ ನೇರವಾಗಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ ನೋಡಿ

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 10.47 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.79 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 777.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 357.37 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.55 ಮಿ.ಮೀ. ಕಳೆದ ವರ್ಷ ಇದೇ ದಿನ 14.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1130.06 ಮಿ.ಮೀ, ಕಳೆದ ವರ್ಷ ಇದೇ […]
RCB ಫ್ಯಾನ್ಸ್ ಗಮನಕ್ಕೆ: ಬೆಂಗಳೂರಿನಲ್ಲಿ ವಿಜಯಯಾತ್ರೆ… ಸಮಯ, ಎಲ್ಲಿಂದ-ಎಲ್ಲಿಗೆ?

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆರ್ಸಿಬಿ ವಿಜಯಯಾತ್ರೆ ನಡೆಯಲಿದೆ. ಟ್ರೋಫಿ ಜೊತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಅಹಮದಾಬಾದ್ನಿಂದ ಆರ್ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ. ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ […]