ಕೊಡಗಿನಲ್ಲಿ ಜೂನ್ 12ರಂದು ಭಾರಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ – ಮಳೆಗೂ ಮುನ್ನವೇ ಶಾಲೆ, ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಮಡಿಕೇರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾದ ಲಕ್ಷಣ ಗೋಚರಿಸುತ್ತಿದ್ದು, ನಾಳೆಯಿಂದ(ಜೂ.೧೨) ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಾ ಅಲರ್ಟ್ ಆಗಿದೆ. ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ. ವೆಂಕಟ್ ರಾಜಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೇ ಕೊನೇ ವಾರದಲ್ಲಿ […]
ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ – ಬದಲಾವಣೆಗೆ ಆಸಕ್ತಿ ತೋರದ ವರಿಷ್ಠರು..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಪುನಾರಾಯ್ಕೆಯಾಗಿದ್ದಾರೆ. ಎರಡನೆ ಹಂತದಲ್ಲಿ ಹತ್ತು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಕೊಡಗು ಜಿಲ್ಲಾಧ್ಯಕ್ಷ ಸ್ಥಾನವನ್ನು ರವಿ ಕಾಳಪ್ಪ ಎರಡನೇ ಅವಧಿಗೆ ಮುಂದುವರೆಸಲಿದ್ದಾರೆ. ಈ ಬಗ್ಗೆ ಬಿಜೆಪಿಯ ಪ್ರಸ್ತುತ ಸಂಘಟನಾ ಪರ್ವದ ಚುನಾವಣಾಧಿಕಾರಿಯಾದ ಕ್ಯಾ. ಗಣೇಶ್ ಕಾರ್ಣಿಕ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ …

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.33 ಮಿ.ಮೀ. ಕಳೆದ ವರ್ಷ ಇದೇ ದಿನ 29.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1171.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಮೌನ ಮುರಿದ ರಾಹುಲ್ ದ್ರಾವಿಡ್: ಹೇಳಿದ್ದೇನು?

ಕ್ರಿಕೆಟ್ ಲೋಕದ ಲೆಜೆಂಡರಿ ಆಟಗಾರ ರಾಹುಲ್ ದ್ರಾವಿಡ್ (Rahul Dravid) ಅವರು ಕೊನೆಗೂ ಮೌನ ಮುರಿದು ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ನಾನು ಕೂಡ ಬೆಂಗಳೂರಿನವನು ಬೆಂಗಳೂರಿನಲ್ಲಿರುವ ಜನರಿಗೆ ಕ್ರೀಡೆಯ ಬಗ್ಗೆ ಪ್ರೀತಿ ಇದೆ. ಜನರು ಕ್ರಿಕೆಟ್ ಮಾತ್ರವಲ್ಲ ಎಲ್ಲಾ ಕ್ರೀಡೆಯನ್ನು ಪ್ರೀತಿಸುತ್ತಾರೆ. ಫುಟ್ಬಾಲ್ ಇರಲ್ಲಿ ಕಬಡ್ಡಿ ಇರಲಿ ಎಲ್ಲಾ ತಂಡವನ್ನು ಜನರು ಫಾಲೋ ಮಾಡುತ್ತಾರೆ . ಈ ಬಾರಿ ಕಪ್ ಗೆದ್ದು 18 ವರ್ಷಗಳ ನಂತರ ಇದರ ಸೆಲೆಬ್ರೇಶನ್ಗಾಗಿ ತಂಡ ಬೆಂಗಳೂರಿಗೆ ಬಂದಿತ್ತು ಈ ವೇಳೆ […]
ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ನಲ್ಲಿ ಪದಕ ಬಾಚಿದ ಕೊಡಗಿನ ಜ್ಯೋತಿ

ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ (Badminton) ಆಟಗಾರ್ತಿ ಕೊಡಗಿನ ತಾತಪಂಡ ಜ್ಯೋತಿ (Jyothi) ಸೋಮಯ್ಯ ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಟೂರ್ನಿಯಲ್ಲಿ ಪದಕಗಳನ್ನು ಬಾಚಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ನಲ್ಲಿ ಮಹಿಳೆಯರ ಸಿಂಗಲ್ಸಿನಲ್ಲಿ ಚಿನ್ನದ ಪದಕ, ಮಹಿಳೆಯರ ಡಬಲ್ಸಿನಲ್ಲಿ ಬೆಳ್ಳಿಯ ಪದಕ ಮತ್ತು ಮಿಕ್ಸ್ ಡಬಲ್ಸಿನಲ್ಲಿ ಕಂಚಿನ ಪದಕ ಬಾಚಿಕೊಂಡಿದ್ದಾರೆ.