CSIR-NIIST ಮತ್ತು ಕೊಡಗು ವಿಶ್ವವಿದ್ಯಾಲಯದ ನಡುವೆ ಒಪ್ಪಂದಕ್ಕೆ ಸಹಿ – ಏನಿದರ ವಿಶೇಷತೆ..?

ಕುಶಾಲನಗರ : ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆಯು ಸ್ಮಾರ್ಟ್, ಸ್ವಚ್ಛ ಮತ್ತು ಸುಸ್ಥಿರ ಆಹಾರ ವ್ಯವಸ್ಥೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯ ವ್ಯಕ್ತಪಡಿಸಿದರು. ತಿರುವನಂತಪುರಂನ ಸಿಎಸ್ಐಆರ್-ರಾಷ್ಟ್ರೀಯ ಅಂತರಶಿಸ್ತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಎಸ್ಐಆರ್-ಎನ್ಐಐಎಸ್ಟಿ)ಯಲ್ಲಿ ಎನ್ಐಐಎಸ್ಟಿಯ ಸುವರ್ಣ ಮಹೋತ್ಸವ ಆಚರಣೆಗಾಗಿ ಆಯೋಜಿಸಿದ್ದ ‘ಮುಂದಿನ ಪೀಳಿಗೆಯ ಆಹಾರ ತಂತ್ರಜ್ಞಾನಗಳು: ಸುಸ್ಥಿರ ನಾಳೆಗಾಗಿ ಸಂಸ್ಕರಣೆ’ ಕುರಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆ ಕೇವಲ ತಾಂತ್ರಿಕ […]
ʼಕೊಡವ ಮುಸ್ಲಿಂ ಅಸೋಸಿಯೇಷನ್ ದಫ್ ಮುಟ್ಟ್’ ತಂಡ ಅಸ್ತಿತ್ವಕ್ಕೆ – ದೂರದರ್ಶನ ಕೇಂದ್ರದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ…

ಪೊನ್ನಂಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧೀನದಲ್ಲಿ ‘ಕೆ.ಎಂ.ಎ. ದಫ್ ಮುಟ್ಟ್ (ರಾತೀಬ್)’ ತಂಡವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ‘ದಫ್ ಮುಟ್ಟ್’ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆಯಲ್ಲಿ ಈ ತಂಡವನ್ನು ರಚಿಸಲಾಗಿದೆ. ಹೊಸದಾಗಿ ರಚನೆಯಾದ ಈ ತಂಡ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ದಫ್ ಮುಟ್ಟ್ ಪ್ರದರ್ಶನವನ್ನು ಪ್ರಸ್ತುತಪಡಿಸಿತು. ಈ ಮೂಲಕ ಕೊಡವ ಮುಸ್ಲಿಮರ ಸಾಂಪ್ರದಾಯಿಕ ಧಾರ್ಮಿಕ ಕಲೆಯನ್ನು ಬೆಂಗಳೂರು ದೂರದರ್ಶನ ಚಂದನ […]
ಕೃತಕ ಕಾಲು ಜೋಡಣೆ ಯಶಸ್ವಿ – ಅಸಹಾಯಕನಿಗೆ ನೆರವಾದ ಮಾಧ್ಯಮ ಸ್ಪಂದನ ಟೀಂ..!

ಗೋಣಿಕೊಪ್ಪ : ತಿತಿಮತಿ ಸಮೀಪದ ನೊಕ್ಯಾ ನಿವಾಸಿ ಪಿ.ಡಿ. ಸುಬ್ರಮಣಿ ಅವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರ ಕೃತಕ ಕಾಲು ಅಳವಡಿಸಲಾಗಿದೆ. ಮನೆಯಿಂದ ಬೆಂಗಳೂರಿಗೆ ತೆರಳಲು ಅವರಿಗೆ ವಾಹನದ ಅಗತ್ಯತೆ ಪಾಲಿಬೆಟ್ಟ ಚೆಶೆರ್ ಹೋಮ್ ಪ್ರಾಂಶುಪಾಲರಾದ ಶಿವರಾಜ ಮಾಧ್ಯಮ ಸ್ಪಂದನ ಗಮನ ಸೆಳೆದಿದ್ದರು. ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಅಧ್ಯಕ್ಷರಾದ ಅನೂಪ್ ಕುಮಾರ್ ಸುಂಟಿಕೊಪ್ಪ ಅವರು ವ್ಯವಸ್ಥೆ ಮಾಡಿದ ವಾಹನದಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು. ಮಾಧ್ಯಮ ಸ್ಪಂದನ ತಂಡದ ಸದಸ್ಯ ಪುತ್ತಂ ಪದೀಪ್ ಬಾಲನ್, […]