ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ – ಮಡಿಕೇರಿ ನಗರ ಬಿಜೆಪಿಯಿಂದ ಕಾರ್ಯಾಗಾರ..!

ಮಡಿಕೇರಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಾರ್ಯಾಗಾರ ನಡೆಯಿತು.  ನಗರದ ಬಿಜೆಪಿ ಕಚೇರಿಯಲ್ಲಿ ಉಮೇಶ್‌ ಸುಬ್ರಹ್ಮಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸರ್ಕಾರದ ಸಾಧನೆ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ, ಕನ್ನಿಕೆ,  ವಕ್ತರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ  ಕಾಂಗೀರ ಸತೀಶ್ ಅಶ್ವಿನ್, ಪ್ರಮುಖರಾದ ಜಗದೀಶ್,  ವಿವಿಧ ಮಂಡಲಗಳ ಮುಖಂಡರು […]

ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ – ಸ್ಮಿತಾ ಅಮೃತರಾಜ್‌ ಅವರ ಅತೀ ಸಣ್ಣ ಕಥೆಗೆ ಪ್ರಶಸ್ತಿ..!

ಮಡಿಕೇರಿ : ಬಂಟ್ವಾಳದ ಯುವವಾಹಿನಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಕೊಡಗಿನ ಸಾಹಿತಿ ಸ್ಮಿತಾ ಅಮೃತರಾಜ್‌ ಸಂಪಾಜೆ ಅವರಿಗೆ ಪ್ರಶಸ್ತಿ ಲಭಿಸಿದೆ.‌ ಕವಿ, ಸಾಹಿತಿ ಬಿ. ತಮ್ಮಯ್ಯ ಅವರ ನೆನಪಿಗಾಗಿ ಅತೀ ಸಣ್ಣ ಕಥೆ ಹಾಗೂ ಲಲಿತ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಅತೀ ಸಣ್ಣ ಕಥೆ ವಿಭಾಗದಲ್ಲಿ ಸ್ಮಿತಾ ಅವರ ʼಸ್ಪೋಟʼ ಕಥೆಗೆ ದ್ವಿತೀಯ ಬಹುಮಾನ ಸಿಕ್ಕಿದೆ. ಪ್ರಥಮ ಬಹುಮಾನ ಸುಲ್ತಾನ್‌ ಮನ್ಸೂರು ಮಂಚಿ(ಜಾಥಾ) ಪಾಲಾಗಿದೆ. ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ರೂಪಕಲಾ ಆಳ್ವ ಅವರ ಬೂಬು […]

ಕಾಂಗ್ರೆಸ್‌ಗೆ ಪ್ರತೀಕ್‌ ಪೊನ್ನಣ್ಣ ಗುಡ್‌ ಬೈ? – ಉಸಿರುಗಟ್ಟಿಸುವ ವಾತಾವರಣದಲ್ಲಿ ನಾನು ಇರಲ್ಲ ಎಂದ ಯುವ ನಾಯಕ..!

ಮಡಿಕೇರಿ : ಕೆಲ ವರ್ಷದ ಹಿಂದಷ್ಟೇ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಸಾಮಾಜಿಕ ಕಾರ್ಯಕರ್ತ ಪ್ರತೀಕ್‌ ಪೊನ್ನಣ್ಣ ಇದೀಗ ದಿಢೀರ್‌ ಆಗಿ ಕಾಂಗ್ರೆಸ್‌ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ತಾನು ಈ ನಿರ್ಧಾರಕ್ಕೆ ಬರಲು ಕಾರಣ ಏನು ಅನ್ನೋದನ್ನೂ ಉಲ್ಲೇಖಿಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೊಡವ ಸಮಾಜದಕ್ಕೆ ಜಮೀನು ನೀಡಿದ್ದಕ್ಕಾಗಿ ಶಾಸಕರು ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿರುವ ಕಾರ್ಯಕ್ರಮದ ವಿಚಾರವೇ ಈಗ ಪ್ರತೀಕ ಈ ನಿರ್ಧಾರಕ್ಕೆ ಕಾರಣವಾಗಿದೆ. ಈ […]

ಬೆಂಗಳೂರು : ಬೈಕ್‌ ಮತ್ತು ಲಾರಿ ಡಿಕ್ಕಿ – ಇಬ್ಬರು ಯುವ ನೃತ್ಯ ಕಲಾವಿದರ ದುರ್ಮರಣ..!

ಬೆಂಗಳೂರು :  ಬೈಕ್‌ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನೆಲಮಂಗಲ ಬಳಿಯ ಕುಣಿಗಲ್ದ‌ನಲ್ಲಿ  ನಡೆದಿದೆ. ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ.  ಶ್ರೀರಾಂಪುರದ ಪ್ರಜ್ವಲ್‌ ಹಾಗೂ ಸಹನಾ ಮೃತ ದುರ್ದೈವಿಗಳು. ಇಬ್ಬರು ಕೂಡಾ ನೃತ್ಯ ಕಲಾವಿದರು ಎಂದು ತಿಳಿದುಬಂದಿದೆ. ಬೈಕ್‌ಗೆ ಡಿಕ್ಕಿಪಡಿಸಿದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.