ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಗಿನ್ನಿಸ್ ವಿಶ್ವ ದಾಖಲೆಗೆ ಸಜ್ಜಾದ ಮದೆನಾಡಿನ ಸಿಂಚನಾ..!

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಕೊಡಗಿನ ಯುವ ಯೋಗಪಟು ಮದೆನಾಡಿನ ಸಿಂಚನಾಳ (Sinchana) ಯೋಗ ಪ್ರದರ್ಶನವನ್ನು ಗಿನ್ನಿಸ್ ವಿಶ್ವದಾಖಲೆಗೆ ಸೇರ್ಪಡೆ ಮಾಡುವ ಕಾರ್ಯಕ್ರಮ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು (International yoga day ) ಮಡಿಕೇರಿಯಲ್ಲಿ ಆಯೋಜಿತವಾಗಿದೆ. ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ಜೂನ್ 21 ರಂದು ಶನಿವಾರ ಸಂಜೆ 6.30 ಗಂಟೆಗೆ ಸಿಂಚನಾಳ ಯೋಗಪ್ರದರ್ಶನವಿರಲಿದೆ.30 ನಿಮಿಷ 5 ಸೆಕೆಂಡ್ ಕಾಲ ಸಿಂಚನಾ ಡಿಂಬಾಸನ ಯೋಗ ಭಂಗಿಯಲ್ಲಿರುವ […]
ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ರೈ..

ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್ ರೈ(Yashas Rai) ಆಯ್ಕೆಯಾಗಿದ್ದಾರೆ. 15ರಿಂದ 28 ವರ್ಷದೊಳಗಿನವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು. ನೆಹರು ಯುವ ಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ಈ ಆಯ್ಕೆ ನಡೆದಿದೆ. ದೇಶಾದ್ಯಂತ ಸಹಸ್ರಾರು ಮಂದಿ ಯುವಕರು ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಆಯ್ಕೆಯಾಗಿದ್ದಾರೆ. ಯಶಸ್ ರೈ ಮೂರ್ನಾಡುವಿನ ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 75.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 989.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 496.42 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 122.45 ಮಿ.ಮೀ. ಕಳೆದ ವರ್ಷ ಇದೇ ದಿನ 9.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1505.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 688.64 […]