ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu )ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 513.48 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ (Average rainfall )10.33 ಮಿ.ಮೀ. ಕಳೆದ ವರ್ಷ ಇದೇ ದಿನ 7.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ […]
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ: ಧರ್ಮಜ ಉತ್ತಪ್ಪ

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ (guarantee) ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಗುರುವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಬಡವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ (Anna bhagya scheme )ಯೋಜನೆಯು ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯ […]
ಶೀಘ್ರದಲ್ಲೇ ದುಬೈನಲ್ಲಿ ಕೊಡಗು ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾಟ

ಕೊಡಗು ಪ್ರೀಮಿಯರ್ ಲೀಗ್ (Kodagu Premier League) – ವಾಲಿಬಾಲ್ ಟೂರ್ನಮೆಂಟ್ 2025ರ ಮೊದಲ ಆವೃತ್ತಿ, ಈ ಉತ್ಸಾಹಪೂರ್ಣ ಕಾರ್ಯಕ್ರಮವು ಕೊಡವ ಕ್ರೀಡಾ ಪ್ರತಿಭೆ, ಶಿಸ್ತು ಮತ್ತು ಸಮುದಾಯದ ಆತ್ಮೀಯತೆಯನ್ನು ತೋರಿಸುವ ಅದ್ಭುತ ವೇದಿಕೆ. ತಂಡದ ಮಾಲೀಕರು ಮತ್ತು ಪ್ರಾಯೋಜಕರು – ನಿಮಗೆ ಆತ್ಮೀಯ ಆಹ್ವಾನ! ಈ ಗೌರವಾನ್ವಿತ ಲೀಗ್ನಲ್ಲಿ ಭಾಗವಹಿಸಲು ತಂಡ ಮಾಲೀಕರು ಮತ್ತು ಪ್ರಾಯೋಜಕರು ಅವರನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತೇವೆ. ಇದು ಕೇವಲ ಕ್ರೀಡಾ ಟೂರ್ನಮೆಂಟ್ (Tournament)ಮಾತ್ರವಲ್ಲ – ನಿಮ್ಮ ಬ್ರ್ಯಾಂಡ್ ಅನ್ನು ಬೆಳಗಿಸಲು ಮತ್ತು […]
International Yoga Day – 3 ಲಕ್ಷ ಜನರ ಸಮ್ಮುಖದಲ್ಲಿ ಪ್ರಧಾನಿ ಮೋದಿ

ಜೂನ್ 21 ರಂದು ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಯುಕ್ತ ಆಂಧ್ರ ಪ್ರದೇಶದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ( (P.M Narendra Modi ) ಅವರು ಭಾಗವಹಿಸಲಿದ್ದಾರೆ. ಹಾಗೂ ಇದರ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಎ. ಚಂದ್ರಬಾಬು ನಾಯ್ಡು, ಇಲ್ಲಿ ಸುಮಾರು 3.19 ಲಕ್ಷ ಜನರು ಏಕಕಾಲದಲ್ಲಿ ಯೋಗ (ಮಾಡಬಹುದು ಹಾಗೂ ಆರ್. ಕೆ ಬೀಚ್ ನಿಂದ ಭೋಗಪುರಂ ವರೆಗೆ 26 ಕಿ.ಮೀ ವ್ಯಾಪ್ತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. […]
ಬಿದ್ದು ಸಿಕ್ಕ ಪರ್ಸ್ವೊಂದನ್ನು ಮಾಲಿಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಶಾಫಿ, ಮುಕ್ರಂ

ವಿರಾಜಪೇಟೆ (virajpet) ನಗರದ ನಿವಾಸಿಗಳಾದ ಮೊಹಮ್ಮದ್ ಶಾಫಿ ಮತ್ತು ಮುಕ್ರಂ ಅವರು ಮಾನವೀಯತೆಯ ಸ್ಫೂರ್ತಿದಾಯಕ ಉದಾಹರಣೆಯಾಗಿ, ವಿರಾಜಪೇಟೆ ನಗರದಲ್ಲಿ ಬಿದ್ದು ಸಿಕ್ಕಿದ್ದ ಪರ್ಸ್ನ್ನು ಅದರೊಳಗಿನ ನಗದು ಹಣ, ಮೊಬೈಲ್ ಫೋನ್ ಹಾಗೂ ಮಹತ್ವದ ಬ್ಯಾಂಕ್ ದಾಖಲೆಗಳೊಂದಿಗೆ ಕೂಡಲೇ ಪೊಲೀಸ್ ಠಾಣೆಗೆ ಹಾಜರುಪಡಿಸಿ, ತಕ್ಷಣವೇ ಪರ್ಸ್ (purse) ಅನ್ನು ಮಾಲಿಕರಾದ ಬಾಳುಗೋಡು ಗ್ರಾಮದ ಲೀಲಾವತಿ ಅವರಿಗೆ ಹಿಂತಿರುಗಿಸುವ ಮೂಲಕ ತಮ್ಮ ಪ್ರಾಮಾಣಿಕತೆ, ನಿಷ್ಠೆ ಮತ್ತು ಸಮಾಜದ ಪರವಾದ ಮಾನವೀಯ ಮೌಲ್ಯಗಳನ್ನು ಮೆರೆದಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಮಹತ್ತರ ಬದಲಾವಣೆ – ಎರಡನೇ, ನಾಲ್ಕನೇ ಶನಿವಾರವೂ ಕಚೇರಿಗಳು ಕಾರ್ಯನಿರ್ವಹಣೆ..!

ನವದೆಹಲಿ : ದೇಶದ ಸರ್ವೋಚ್ಛ ನ್ಯಾಯಾಲಯವು ತನ್ನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಮಹತ್ತರವಾದ ಬದಲಾವಣೆ ಮಾಡಿದೆ. ಅದೇನೆಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೆಲಸದ ಅವಧಿಯಲ್ಲಿನ ಮಾರ್ಪಾಡು. ಎರಡನೇ ಮತ್ತು ನಾಲ್ಕನೇ ಶನಿವಾರ ಸರ್ಕಾರಿ ರಜೆ ಇದ್ದು, ಈವರೆಗೆ ಅದು ಸುಪ್ರೀ ಕೋರ್ಟ್ ಕಚೇರಿ ವ್ಯಾಪ್ತಿಗೂ ಅನ್ವಯವಾಗಿತ್ತು. ಆದರೆ ಈಗ ಆಗಿರುವ ಸುಪ್ರೀಂ ಕೋರ್ಟ್ ತಿದ್ದುಪಡಿ ನಿಯಮದ ಪ್ರಕಾರ ಈ ಎರಡು ದಿನಗಳನ್ನು ಕೆಲಸದ ವ್ಯಾಪ್ತಿಗೆ ತರಲಾಗಿದೆ. ಅಂದರೆ ಇನ್ನು ಮುಂದೆ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಕೂಡಾ […]
ಯೋಗ ಭಾರತಿ ಹಾಗೂ ಯೋಗ ಸಂಧ್ಯಾ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಡಿಕೇರಿ : ಯೋಗ ಭಾರತಿ ಹಾಗೂ ಯೋಗ ಸಂಧ್ಯಾ ವತಿಯಿಂದ ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂ. ೧೧ರಂದು ನಡೆಯಲಿದೆ. ಅಂದು ಬೆಳಗ್ಗೆ 6.30ರಿಂದ 8.30ರವರೆಗೆ ಮಡಿಕೇರಿಯ ಗೌಡ ಸಮಾಜ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸರಳ ಯೋಗ ಮತ್ತು ಪ್ರಾಣಾಯಾಮ ಅಭ್ಯಾಸವನ್ನು ಯೋಗ ಗುರುಗಳು ಮಾಡಿಸಲಿದ್ದಾರೆ. ಈ ಬಾರಿ ʼಒನ್ ಅರ್ಥ್ ಒನ್ ಹೆಲ್ತ್ʼ(one earth, one health) ಧ್ಯೇಯದೊಂದಿಗೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆ ಪ್ರಮುಖರು ಕೋರಿದ್ದಾರೆ. ಯೋಗ […]