ಪಾಲಿಬೆಟ್ಟ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನಾಚರಣೆ

ಪಾಲಿಬೆಟ್ಟ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮೇಲ್ವಿಚಾರಕಿ ಸುಮಯ್ಯ ಕೆ. ಎಂ., ಸಿಬ್ಬಂದಿ ಸುಜಾತ, ಪ್ರೀತು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಜೂ.27ಕ್ಕೆ

ಮಡಿಕೇರಿ : ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಜೂನ್, ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

ದುಬೈ-ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಾರ್ಷಿಕ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ..!

ಮಡಿಕೇರಿ : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೊದವಾಡದ ರಾಫಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶೈಕ್ಷಣಿಕವಾಗಿ ಸಾಧನೆಗೈಡ ಭಾಷಿತ, ಡಿಯಾನ, ಚರಿಷ್ಮಾ, ಹೇಮಾವತ, ಸಫಾನಾ, ಫಾಹಿನ ಅವರನ್ನು ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ […]

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!

ಮಡಿಕೇರಿ : ಪ್ರಸಕ್ತ (೨೦೨೫-೨೬) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್‌ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ […]

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ – ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತರು ಜೂನ್, ೩೦ ರೊಳಗೆ ಬೆಳಗ್ಗೆ […]

ಕೊಡಗು ಜಿಲ್ಲಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಯೋಗದ ಮಹತ್ವ ವಿವರಿಸಿದ ಗಣ್ಯರು..!

ಮಡಿಕೇರಿ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ೧೧ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ […]

ಮೊದಲ ಬಾರಿ ಯೋಗ ಮಾಡ್ತಾ ಇದ್ದೀರಾ..? ಹಾಗಿದ್ರೆ ಈ ಬಗ್ಗೆ ಗಮನವಿರಲಿ..!

yoga practice

Coorg buzz health tips : ಯೋಗ (Yoga) ಮಾಡುವುದರಿಂದ ನಾವು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಯೋಗವು ದೇಹ ಮತ್ತು ಮನಸನ್ನು ಶಾಂತಗೊಳಿಸಲು, ದೈಹಿಕ ಮಾನಸಿಕ ಸಮತೋಲನವನ್ನು ನಿರ್ವಹಿಸುತ್ತದೆ. ಆಧುನಿಕ ಯುಗದಲ್ಲಿ ಮನುಷ್ಯನಿಗೆ ಒತ್ತಡ ಹೆಚ್ಚಾಗಿದೆ. ಹೀಗಾಗಿ 20 ರಿಂದ 30 ನಿಮಿಷಗಳ ಕಾಲ ಯೋಗ ಮಾಡುವ ಮೂಲಕ ನೀವು ನಿಮ್ಮ ಜೀವನವನ್ನು ಉತ್ತಮಗೊಳಿಸಬಹುದು. ಬೆಳಗ್ಗೆ ಎದ್ದು ಯೋಗಾಭ್ಯಾಸ (Yoga practice) ಮಾಡುವುದರಿಂದ ಹಲವಾರು ರೀತಿಯ ಕಾಯಿಲೆಗಳನ್ನು ತಪ್ಪಿಸಬಹುದು. ಯೋಗ ಮಾಡುವಾಗ ನಾವು ಹಲವು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. […]

ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ : ಜೂನ್ 27 ಕೊನೆ ದಿನಾಂಕ

Job opportunity

ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ(application) ಆಹ್ವಾನಿಸಲಾಗಿದೆ. ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದು.(ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು). ವೇತನ ಶ್ರೇಣಿ ರೂ.18,150. ಎಂಎಸ್ಸಿ, ಬಿ.ಇಡಿ ವಿದ್ಯಾರ್ಹತೆ (qualification) ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. 08272–225528, 9686138688 ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ. 7676473767 ನ್ನು ಸಂಪರ್ಕಿಸಬಹುದು […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

kodagu rain

ಕೊಡಗು (Kodagu) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.35 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1065.39 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ(during this same period)  516.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ (average rainfall )14.90 ಮಿ.ಮೀ. ಕಳೆದ ವರ್ಷ ಇದೇ ದಿನ 11.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1601 […]

ರಾತ್ರಿ ನಿದ್ರೆಯಲ್ಲಿ ಪದೇಪದೇ ಎಚ್ಚರವಾಗುವುದನ್ನು ನಿರ್ಲಕ್ಷಿಸಬೇಡಿ !!

Health Tips

Coorg Buzz Health Tips : ಮನುಷ್ಯನಿಗೆ ನಿದ್ರೆ ( Sleep) ಬಹಳ ಮುಖ್ಯ. ರಾತ್ರಿ ಸರಿಯಾದ ಸಮಯದಲ್ಲಿ ನಿದ್ರಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದರೆ ಕೆಲವರಿಗೆ ರಾತ್ರಿ ಆಗಾಗ್ಗೆ ಎಚ್ಚರವಾಗುವುದುಂಟು. ಹೀಗೆ ಎಚ್ಚರವಾಗುವುದು ಏಕೆಂದು ತಿಳಿದಿದೆಯಾ.? ಈ ರೀತಿ ಆಗುವುದಕ್ಕೆ ಹಲವಾರು ಕಾರಣಗಳಿದೆ. ಇದನ್ನು ನಿರ್ಲಕ್ಷಿಸಿದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗೆ (health problems )ಕಾರಣವಾಗಬಹುದು. ಆಗಾಗ್ಗೆ ಎಚ್ಚರವಾಗುವುದಕ್ಕೆ ಕಾರಣ..? ಪ್ರತಿನಿತ್ಯ ಸಮಯಕ್ಕೆ ಸರಿಯಾಗಿ ಮಲಗದಿರುವುದು, ಜೊತೆಗೆ ಮಲಗುವ ಮೊದಲು ಮೊಬೈಲ್, ಟಿವಿ, ಲ್ಯಾಪ್ಟಾಪ್‌ ಮುಂತಾದ […]