ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ – ಜುಲೈ 01ರಂದು ಪ್ರದಾನ ಸಮಾರಂಭ..!

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ದಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜು.1 ರಂದು ಮಂಗಳವಾರ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು […]
ಅರೆಭಾಷೆ ಸಾಹಿತ್ಯ ಅಕಾಡೆಮಿ ವತಿಯಿಂದ ಸಂಶೋಧನಾ ಪ್ರಬಂಧ ಫೆಲೋಶಿಪ್ಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಆಚಾರ ವಿಚಾರ, ಜಾನಪದ ಹಾಗೂ ಕಲೆಗೆ ಸಂಬಂಧಿಸಿದ ಸಂಶೋಧನಾ ಪ್ರಬಂಧಕ್ಕೆ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ ೨೧ ಕೊನೆಯ ದಿನವಾಗಿದೆ. ಬಂದಿರುವ ಅರ್ಜಿಗಳನ್ನು ಆಯ್ಕೆ ಸಮಿತಿಯಲ್ಲಿ ಪರಿಶೀಲಿಸಿ ನಾಲ್ಕು ಸೂಕ್ತ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ತಲಾ ರೂ ೭೫,೦೦೦ ದಂತೆ ಫೆಲೋಶಿಫ್ ನೀಡಲಾಗುವುದು. ಈ ಹಿಂದೆ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಿದವರಿಗೆ ಅವಕಾಶ ಇರುವುದಿಲ್ಲ. ಫೆಲೋಶಿಫ್ಗೆ […]
ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವನ್ಯ ಪ್ರಾಣಿ-ಮಾನವ ಸಂಘರ್ಷ ಪ್ರತಿಧ್ವನಿ : ಉಸ್ತುವಾರಿ ಸಚಿವ ಬೋಸರಾಜ್ ಹೇಳಿದ್ದೇನು..?

ಮಡಿಕೇರಿ : ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಹಾಗೂ ಮಾನವ ಸಂಘರ್ಷ ನಿರಂತರವಾಗಿ ಮುಂದುವರಿದಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು […]
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ

ಮಡಿಕೇರಿ : ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು. ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ […]
ಈ ಬಾರಿ ೧೧ ದಿನ ನಾಡಹಬ್ಬ ದಸರಾ ಆಚರಣೆ – ವಿಜೃಂಭಣೆಯ ಉತ್ಸವಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ..!

ಬೆಂಗಳೂರು : ಈ ಬಾರಿಯ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು. ಈ ಬಾರಿ […]
ಚಾಮರಾಜನಗರ : ಐದು ಹುಲಿ ಸಾವು ಪ್ರಕರಣ – ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ..!

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವಿಷವಿಕ್ಕಿದ್ದ ಮಾದರಾಜು, ನಾಗರಾಜು ಇಬ್ಬರನ್ನು ಮೊದಲು ಬಂಧಿಸಲಾಗಿತ್ತು. ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ. ಈತನನ್ನು ಮೃತ ಹಸುವಿನ ಮಾಲೀಕ ಎನ್ನಲಾಗಿದೆ. ಕಳ್ಳಬೇದೊಡ್ಡಿಯ ಮಾದುರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.
ಸ್ವಸ್ತಿಕ್ ಯುವ ವೇದಿಕೆ ಗಣೇಶೋತ್ಸವ ಸಮಿತಿಗೆ ಜಂಟಿ ಅಧ್ಯಕ್ಷರಾಗಿ ಜಗದೀಶ್, ಮಿಲನ್ ಆಚಾರ್ಯ ಆಯ್ಕೆ

ಮಡಿಕೇರಿ : ಸ್ವಸ್ತಿಕ್ ಯುವ ವೇದಿಕೆಯ 24ನೇ ವರ್ಷದ ಗಣೇಶೋತ್ಸವ ಸಮಿತಿಯ ಜಂಟಿ ಅಧ್ಯಕ್ಷರಾಗಿ ಜಗದೀಶ್ (ಜಗ್ಗಿ) ಹಾಗೂ ಮಿಲನ್ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಂದ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿ, ಸಹ ಕಾರ್ಯದರ್ಶಿಯಾಗಿ ಪುನೀತ್ ಭೀಮಯ್ಯ, ಖಜಾಂಜಿಯಾಗಿ ಅಂಚೆಮನೆ ಸತೀಶ್ ಕುಟ್ಟಪ್ಪ, ಸಹ ಖಜಾಂಜಿಯಾಗಿ ಮನೋಹರ್, ಗೌರವರಾಧ್ಯಕ್ಷರಾಗಿ ಸವಿತಾ ರಾಕೇಶ್, ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್, ನಿರ್ದೇಶಕರಾಗಿ ಜಯನ್ ಡಿ, ಶಿವರಾಜ್, ಸೋನಲ್ ಎಂ.ಎಸ್, ಮಂಜುನಾಥ್, ಹೇಮಂತ್ ಕುಮಾರ್, ಸಮಿತಿ ಮುಖ್ಯಸ್ಥರಾಗಿ ಎಂ.ಎಸ್. ಪ್ರಸಾದ್ ಆಯ್ಕೆಯಾಗಿದ್ದಾರೆಂದು ಸಮಿತಿಯ […]
SKSSF ಚೋಕಂಡಳ್ಳಿ ನಲುವತ್ತೊಕ್ಲು ಯೂನಿಟ್ ವತಿಯಿಂದ ಸಮಸ್ತ ಸ್ಥಾಪಕ ದಿನಾಚರಣೆ

ಮಡಿಕೇರಿ : ಚೋಕಂಡಳ್ಳಿ ನಲುವತ್ತೊಕ್ಲುವಿನ SKSSF ಘಟಕ ವತಿಯಿಂದ ಸಮಸ್ತ ಸ್ಥಾಪಕ ದಿನಾಚರಣೆ ಇತ್ತೀಚೆಗೆ ನಡೆಯಿತು. ಘಟಕ ಅಧ್ಯಕ್ಷ ರಶೀದ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಝಿಯಾಉದ್ಧೀನ್ ಬಾಖವಿ ಉದ್ಘಾಟಿಸಿದರು. ಸಂಚಾಲಕ ಜೈನುದ್ಧೀನ್ ಮಸ್ಲಿಯಾರ್ ಮುಖ್ಯ ಭಾಷಣ ಮಾಡಿದರು. ಎಲ್ಲರೂ ಸಮಸ್ತ ಅಧೀನದಲ್ಲಿ ಕಾರ್ಯ ನಿರ್ವಹಿಸಬೇಕು. ಸಮಸ್ತ ಶತಮಾನೋತ್ಸವ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವಂತೆ ಪ್ರಮುಖರು ಕರೆ ನೀಡಿದರು. ಸಮಸ್ತ 100ನೇ ವಾರ್ಷಿಕ ಸಮ್ಮೇಳನ ಪ್ರಚಾರದ ಪ್ರಯುಕ್ತ ಸಿದ್ಧಪಡಿಸಲಾದ ಕೀ ಬಂಚ್ ಅನ್ನು ವಿತರಿಸಲಾಯಿತು. ಕಾರ್ಯದರ್ಶಿ ನೌಷಾದ್ […]
ಮೇಯಲು ಬಂದಿದ್ದ ಹಸು ವಿದ್ಯುತ್ ಸ್ಪರ್ಶವಾಗಿ ದುರ್ಮರಣ..!

ಕುಶಾಲನಗರದ : ವಿದ್ಯುತ್ ತಗಲಿ ಹಸುವೊಂದು ಮೃತಪಟ್ಟ ಘಟನೆ ರಾಧಾಕೃಷ್ಣ ಬಡಾವಣೆಯ ಓಂ ಶಾಂತಿ ಆಶ್ರಮದ ಉದ್ಯಾನದ ಬಳಿ ನಡೆದಿದೆ. ಪಾರ್ಕ್ ಬಳಿ ಮೇಯುತ್ತಿದ್ದ ವೇಳೆ ಹಸುವಿಗೆ ವಿದ್ಯುತ್ ಸ್ಪರ್ಶವಾಗಿ ಈ ದುರ್ಘಟನೆ ಸಂಭವಿಸಿದೆ.ಮುಳ್ಳುಸೋಗೆಯ ಎಂ.ಎಸ್. ಪ್ರಸನ್ನ ಎಂಬವರಿಗೆ ಸೇರಿದ ಹಸುವಾಗಿದ್ದು, ತನ್ನ ಮುದ್ದಿನ ಹಸು ಮೃತಪಟ್ಟಿದ್ದನ್ನ ಕಂಡು ರೋಧಿಸುತ್ತಿದ್ದ ಚಿತ್ರಣ ಅಲ್ಲಿದ್ದವರಲ್ಲೂ ಕಂಬನಿ ತರಿಸಿತ್ತು. ಈ ವ್ಯಾಪ್ತಿಯಲ್ಲಿ ಹೆಚ್ಚಿನ ಮಕ್ಕಳು ಆಟವಾಡಲು ಬರುತ್ತಿರುತ್ತಾರೆ. ಇಂದು ರಜೆ ಕೂಡಾ ಇದ್ದುದ್ದರಿಂದ ಸಮಯ ಕಳೆದಂತೆ ಹೆಚ್ಚಿನ ಮಕ್ಕಳು ಬರುವ […]