ಅತಿವೃಷ್ಟಿಯಿಂದ ಕಾಫಿ ಬೆಳೆ ಹಾನಿ – ಬೆಳೆಗಾರರಿಗೆ ನೆರವಾಗುವಂತೆ ಕಾಫಿ ಮಂಡಳಿಗೆ ಮನವಿ..!

ಸೋಮವಾರಪೇಟೆ : ಪ್ರಸ್ತುತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾಫಿ (Coffee) ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುವುದರಿಂದ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ. ಸೋಮವಾರಪೇಟೆಗೆ ಆಗಮಿಸಿದ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರನ್ನು ಭೇಟಿಯಾದ ಪ್ರಮುಖರು ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು […]

ವಾಯುಪಡೆ ಅಗ್ನಿವೀರರ ಪ್ರವೇಶ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ […]

ಕರ್ಣಂಗೇರಿಯಲ್ಲಿ ವಿಟಮಿನ್ ʼಎʼ ದ್ರಾವಣ, ಅಂಧತ್ವ ನಿವಾರಣೆ ಜಾಗೃತಿ ಕಾರ್ಯಕ್ರಮ

ಮಡಿಕೇರಿ : ಕರ್ಣಂಗೇರಿ ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಒಳಪಟ್ಟ ಮಕ್ಕಳಿಗೆ ಅಂಧತ್ವ ನಿವಾರಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಳಕ್ಕಾಗಿ ವಿಟಮಿನ್ ಎ ದ್ರಾವಣ ಹಾಕಲಾಯಿತು. ವಿಟಮಿನ್ಎ ದ್ರಾವಣ, ಅತಿಸಾರ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮ, ಜಿಂಕ್ ಮಾತ್ರೆ ಬಳಕೆ ಬಗ್ಗೆ ಆರೋಗ್ಯ ಇಲಾಖೆಯ phco ದೇವಕಿ ಮಾಹಿತಿ ನೀಡಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಮಳೆಗಾಲದಲ್ಲಿ ಮಕ್ಕಳಿಗೆ ಎದುರಾಗುವ ಆರೋಗ್ಯ ಸಮಸ್ಯೆ ತಡೆಗಟ್ಟಲು ಪೋಷಣಾಂಶಯುಕ್ತ ಆಹಾರ ಸೇವನೆ ಹಾಗೂ ಸ್ವಚ್ಛತೆಗೆ ಹೆಚ್ಚು ಗಮನಹರಿಸಲು […]

ಅರ್ಪಿತಾಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅರ್ಪಿತಾ ಜಿ. ಎ. ಮಂಡಿಸಿದ್ದ ಮಹಾಪ್ರಬಂಧವನ್ನು ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಇವರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಾರವಾರದ ಇ ಅಂಡ್ ಸಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಎ. ಎಲ್. ಚೂಡಾರತ್ನಾಕರ ಮಾರ್ಗದರ್ಶನದಲ್ಲಿ “Landslide Susceptibility Mapping for Kodagu Region using Machine Learning Techniques” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆಯನ್ನು ಕೈಗೊಂಡು ಮಹಾಪ್ರಬಂಧವನ್ನು ವಿಟಿಯುಗೆ ಸಾಧರಪಡಿಸಿದ್ದಾರೆ. […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 27.18 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1598.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 980.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.90 ಮಿ.ಮೀ. ಕಳೆದ ವರ್ಷ ಇದೇ ದಿನ 19.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2308.91 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]