ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಕುಶಾಲನಗರ ತಾಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದು, ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.24 ಸಾವಿರ ಮೊತ್ತದ ಚೆಕ್ ಅನ್ನು ಗುರುವಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ. ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ. ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.
ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ

ಮಡಿಕೇರಿ : ಪಾಲಿಬೆಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್ ಉಪನಿರೀಕ್ಷಕ ಹೆಚ್.ಕೆ. ಮಂಜುನಾಥ್ ಅವರು ಪೋಕ್ಸೊ ಕಾಯ್ದೆ,112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮ, ಮೊಬೈಲ್ ಬಳಕೆ, ಸೈಬರ್ ಅಪರಾಧ, ಬಾಲ ಅಪರಾಧ, ಗುಡ್ ಟಚ್-ಬ್ಯಾಡ್ ಟಚ್ ಇವುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯದ […]