Ind Vs Eng ಕೊನೆಯ ಟೆಸ್ಟ್‌ ಪಂದ್ಯದಲ್ಲಿ ರೋಚಕವಾಗಿ ಗೆದ್ದು ಇತಿಹಾಸ ಬರೆದ ಟೀಂ ಇಂಡಿಯಾ..!‌ – ಉಫ್..!‌ ಎಂಥಾ ಮ್ಯಾಚ್‌ ಗರು..! ಎಂದ ಕ್ರಿಕೆಟ್‌ ಫ್ಯಾನ್ಸ್

ಇಂಗ್ಲೆಂಡ್ : ಇಂಗ್ಲೆಡ್‌ ವಿರುದ್ಧದ ಆಂಡರ್ಸನ್‌ ತೆಂಡೂಲ್ಕರ್‌ ಸರಣಿಯ ಐದನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್‌ ಅಂತರದಿಂದ ರೋಚಕವಾಗಿ ಗೆಲುವು ಸಾಧಿಸಿದೆ. ಕೊನೆಯ ದಿನ ಇಂಗ್ಲೆಂಡ್‌ ತಂಡಕ್ಕೆ ಗೆಲ್ಲಲು 35 ರನ್‌ ಅಗತ್ಯವಿತ್ತು. ಭಾರತ ಗೆಲ್ಲೋದಕ್ಕೆ 04 ವಿಕೆಟ್‌ ಕಬಳಿಸಬೇಕಿತ್ತು. ದಿನದ ಮೊದಲ ಸೆಷನ್‌ನ ಮೊದಲ ಓವರ್‌ನಲ್ಲಿ ಪ್ರಸಿದ್ಧ್‌ ಕೃಷ್ಣ ಓವರ್‌ನಲ್ಲಿ ಎರಡು ಬೌಂಡರಿ ಬಾರಿಸಿದ ಇಂಗ್ಲೀಷ್‌ ಬ್ಯಾಟರ್‌ಗಳು ಆತಂಕ ಹುಟ್ಟಿಸಿದರು. ಆದರೆ ಅದ್ಭುತ ಲಯದಲ್ಲಿರುವ ಸಿರಾಜ್‌ ತಮ್ಮ ಮೊನಚಿನ ಬೌಲಿಂಗ್‌ ದಾಳಿ ಸಂಘಟಿಸಿ […]

ನಾಳೆ ನಡೆಯುತ್ತಾ ಸಾರಿಗೆ ನೌಕರರ ಮುಷ್ಕರ..? – ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ(ಆ.05) ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಆ.04ರೊಳಗೆ ಈಡೇರಿಸುವಂತೆ ನೌಕರರ ಸಂಘಟನೆಗಳು ಆಗ್ರಹಿಸಿದ್ದವು. ಈಡೇರದಿದ್ದರೆ ನಾಳೆಯಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿವೆ. ಈ ಮಧ್ಯೆ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒಕ್ಕೂಟದೊಂದಿದೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಚರ್ಚೆ ನಡೆಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ […]

ನಾಪೋಕ್ಲುವಿನಲ್ಲಿ ಸಾಂಪ್ರದಾಯಿಕ ಬೊಡಿ ನಮ್ಮೆ ಆ.07ಕ್ಕೆ

ನಾಪೋಕ್ಲು : ನಾಲ್ನಾಡ್ ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಬಿದ್ದಾಟಂಡ ಬುಟ್ಟಿ ಯಾಕ ತೆಂವಾದಲ್ಲಿ ಆಗಸ್ಟ್ 7 ಕ್ಕೆ ಸಾಂಪ್ರದಾಯಿಕ ಬೊಡಿ ನಮ್ಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ 0.22 ರೈಫಲ್‌ನಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವುದು(50 ಮೀಟರ್), 12 ಬೋರ್ ಕೋವಿಯಲ್ಲಿ ತೆಂಗಿನ ಕಾಯಿಗೆ ಗುಂಡು( 27 ಮೀಟರ್) ಹೊಡೆಯುವ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕರು […]