ವಿರಾಜಪೇಟೆ ಸ್ನೇಹಿತರ ಒಕ್ಕೂಟದಿಂದ ಹೆಗ್ಗಳ ಸರ್ಕಾರಿ ಶಾಲಾ ಮಕ್ಕಳಿಗೆ ಟೈ, ಬೆಲ್ಟ್ ವಿತರಣೆ

ಸ್ನೇಹಿತರ ಒಕ್ಕೂಟ ವಿರಾಜಪೇಟೆ (Virajpet) ವತಿಯಿಂದ ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸರಿಸುಮಾರು 25 ಮಕ್ಕಳಿಗೆ ಟೈ ,ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ನೀಡುವ ಮೂಲಕ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿರುತ್ತಾರೆ ಇವರ ಈ ಕಾರ್ಯ ಸಾರ್ವಜನಿಕರಲ್ಲಿ ಉತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದ್ದು ಸ್ನೇಹಿತರ ಒಕ್ಕೂಟ ಪ್ರಮುಖರಿಗೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕರೆಲ್ಲ ಸೇರಿ ತುಂಬು ಹೃದಯದ ಧನ್ಯವಾದಗಳು ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರ ಒಕ್ಕೂಟ ಪ್ರಮುಖರಾದ […]
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ:- ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕøತಿ […]
ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀದರ ಶಿಕ್ಷಕರಿಗೆ ಸಂಬಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದಿದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಗ್ರಂಥಾಲಯಗಳು ಜ್ಞಾನಾರ್ಜನೆಯ ಪ್ರಮುಖ ತಾಣವಾಗಿದ್ದು. ಸಮಾಜದ ಪ್ರಗತಿಗೆ ಹಾಗೂ ಪ್ರತಿ ಓದುಗರ ಬೆಳವಣಿಗೆಗೆ ಗ್ರಂಥಾಲಯ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ (Virajpet) ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾದ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ 133 ನೇ ಜನ್ಮ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು ಪ್ರತಿವರ್ಷ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಮಾಡುತ್ತಾ ಬಂದಿದ್ದೇವೆ. ಇಂದಿನ ಡಿಜಿಟಲ್ ಯುಗದಲ್ಲಿಯೂ […]
C & D ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕರೆ ನೀಡಿರುವ ಸೋಮವಾರಪೇಟೆ ಬಂದ್ಗೆ ಉತ್ತಮ ಪ್ರತಿಕ್ರಿಯೆ

ಸೋಮವಾರಪೇಟೆ : ಸಿ ಆಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೋಮವಾರಪೇಟೆ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಹೋರಾಟ ಸಮಿತಿಯು ತಾಲೂಕು ಬಂದ್ಗೆ ಕರೆ ನೀಡಿದ್ದು, ಸೋಮವಾರಪೇಟೆ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಇಲ್ಲಿನ ವಿವೇಕಾನಂದ ಸರ್ಕಲ್ ಬಳಿ ಸೇರಿದ ರೈತರು ವಾಹನ ಸಂಚಾರಕ್ಕೆ ತಡೆವೊಡ್ಡಿದರು. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಅಂಗಡಿ ಮಳಿಗೆಗಳು ಬಂದ್ ಆಗಿವೆ. ಪ್ರತಿಭಟನೆ ವೇಳೆ ತಹಸೀಲ್ದಾರ್ ಕೃಷ್ಣಮೂರ್ತಿ, ಆರ್ಎಫ್ಒ ಶೈಲೇಂದ್ರ ಅವರನ್ನು ಸುತ್ತುವರೆದು ಆಕ್ರೋಶ […]