17ನೇ ಆವೃತ್ತಿ ಈಶ ಗ್ರಾಮೋತ್ಸವ – ಕರ್ನಾಟದಲ್ಲಿ 700ಕ್ಕೂ ಹೆಚ್ಚು ತಂಡಗಳು, 8100ಕ್ಕೂ ಹೆಚ್ಚು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ

ಮಡಿಕೇರಿ : ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ(isha) ಗ್ರಾಮೋತ್ಸವ 17ನೇ ಆವೃತ್ತಿ ಕರ್ನಾಟಕದಲ್ಲಿ ಈಗಾಗಲೆ ಆರಂಭವಾಗಿದ್ದು, 700ಕ್ಕೂ ಹೆಚ್ಚು ತಂಡಗಳು, 8,100ಕ್ಕೂ ಹೆಚ್ಚು ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಕರ್ನಾಟಕದ 18 ಜಿಲ್ಲೆಗಳಲ್ಲಿ 19 ಕ್ಲಸ್ಟರ್ಗಳಲ್ಲಿ ನಡೆಯುತ್ತಿದೆ. ಎಂಟು ಕ್ಲಸ್ಟರ್ಗಳಲ್ಲಿ ಥ್ರೋಬಾಲ್ ಪಂದ್ಯಾವಳಿ ನಡೆಯುತ್ತವೆ. ಪುರುಷರ ವಿಭಾಗದಲ್ಲಿ ವಾಲಿಬಾಲ್ ಮತ್ತು ಮಹಿಳೆಯರ ವಿಭಾಗದಲ್ಲಿ ಥ್ರೋಬಾಲ್ ನಡೆಯಲಿದೆ. ಫೈನಲ್ನಲ್ಲಿ ಪ್ಯಾರಾ ವಾಲಿಬಾಲ್ ಪ್ರದರ್ಶನ ಪಂದ್ಯವೂ ಜರುಗಲಿದೆ. ರಾಜ್ಯದಲ್ಲಿ ಕ್ಲಸ್ಟರ್ […]
ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣ – ಸರ್ಕಾರಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಕೆ – ಮುಂದಿನ ನಡೆ ಏನು..?

ಬೆಂಗಳೂರು : ದೇಶಾದ್ಯಂತ ಸದ್ದು ಮಾಡಿರುವ ಧರ್ಮಸ್ಥಳದಲ್ಲಿ ನೂರಾರು ಶ*ವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖಾ ಪ್ರಗತಿಯ ವರದಿಯನ್ನು ತನಿಖೆ ನಡೆಸುತ್ತಿರುವ ಎಸ್ಐಟಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಪ್ರಕರಣ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಭೇಟಿಯಾದ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ವರದಿ ಸಲ್ಲಿಕೆ ಮಾಡಿ, 45 ನಿಮಿಷಕ್ಕೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಸಲ್ಲಿಕೆಯಾಗಿರುವ ತನಿಖಾ ಪ್ರಗತಿ ಆಧರಿಸಿ ಸದನದಲ್ಲಿ ಚರ್ಚೆಯಲ್ಲಿ ಪರಮೇಶ್ ಉತ್ತರ ನೀಡುವ ಸಾಧ್ಯತೆ […]
ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಸಿಬ್ಬಂದಿ – ಜನರ ಆಕ್ರೋಶದ ಬಳಿಕ ನಗರಸಭೆ ಮಾಡಿದ್ದೇನು..!?

ಮಡಿಕೇರಿ : ನಗರದ ಅಬ್ಬಿಫಾಲ್ಸ್ ರಸ್ತೆಯಲ್ಲಿ ಗುಂಡಿಗಳಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ವಾಹನ ದಟ್ಟಣೆ ಕೂಡಾ ದೊಡ್ಡ ಪ್ರಮಾಣದಲ್ಲಿ ಆಗುತ್ತಿತ್ತು. ಹೀಗಾಗಿ ಆಗಸ್ಟ್ 17ರಂದು ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆ ಮಧ್ಯೆ ನಿರ್ಮಾಣವಾಗಿದ್ದ ಗುಂಡಿಗಳಿಗೆ ಕಲ್ಲು ಹಾಕಿ ಮುಚ್ಚಿ ವಾಹನ ಸಂಚಾರ ಸುಗಮವಾಗಲು ಶ್ರಮಿಸಿದ್ದರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದನ್ನು ಕಂಡ ಜನ ನಗರಸಭೆ ವಿರುದ್ಧ ತೀವ್ರವಾಗಿ ಆಕ್ರೋಶ ಹೊರಹಾಕಿದ್ದರು. ಇದಾದ ಎರಡೇ ದಿನದಲ್ಲಿ ನಗರಸಭೆ ಅಲರ್ಟ್ ಆಗಿದೆ. ಎಚ್ಚೆತ್ತಿರುವ ನಗರಸಭೆ ಎಂ […]
ತೊಂಬತ್ತುಮನೆ : ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಶೀಲಾವತಿಯವರಿಗೆ ಬೀಳ್ಕೊಡುಗೆ

ಮಡಿಕೇರಿ : ತೊಂಬತ್ತುಮನೆ ಅಂಗನವಾಡಿ ಕಾರ್ಯಕರ್ತೆಯಾಗಿ 36 ವರ್ಷ ಕಾರ್ಯನಿರ್ವಹಿಸಿದ ಅಮ್ಮಚಳಿಯಂಡ ಎಂ.ಬಿ. ಶೀಲಾವತಿ ಅವರು ಇತ್ತೀಚೆಗೆ ನಿವೃತ್ತರಾದರು. ಇವರನ್ನು ಇಲಾಖೆ ಹಾಗೂ ಸಹೋದ್ಯೋಗಿ ಮಿತ್ರರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಶೀಲಾವತಿ ಅವರನ್ನು ಗೌರವಿಸಿದರು.
ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ದಿಬ್ಬಕ್ಕೆ ಡಿಕ್ಕಿಯಾದ KSRTC ಬಸ್..!

ಮಾದಾಪುರ : ಕೆಎಸ್ಆರ್ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಸರಿದ ಘಟನೆ ಮುಟ್ಲುವಿನಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಇಲ್ಲಿನ ಸುಬ್ರಹ್ಮಣ್ಯ ದೇವಾಲಯ ಬಳಿ ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ಬದಿಗೆ ಸರಿದು ಅಲ್ಲೇ ಇದ್ದ ಸಣ್ಣ ದಿಬ್ಬಕ್ಕೆ ಡಿಕ್ಕಿಯಾಗಿ ನಿಂತಿದೆ. ಬಸ್ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.