ಸಾಮಾಜಿಕ ಜಾಲತಾಣದಲ್ಲಿ ಸಚಿವ ಸಂತೋಷ್‌ ಲಾಡ್‌ಗೆ ನಿಂದನೆ – ಯುವ ಕಾಂಗ್ರೆಸ್‌ನಿಂದ ಎಸ್ಪಿಗೆ ದೂರು

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ಗೆ ಅವಾಚ್ಯ ಶಬ್ದಗಳಿಂದ ವ್ಯಕ್ತಿಯೊಬ್ಬರು ನಿಂದಿಸಿದ್ದಾರೆಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಎಸ್ಪಿ ಕೆ. ರಾಮರಾಜನ್‌ ಅವರಿಗೆ ದೂರು ನೀಡಲಾಯಿತು. ಇತ್ತೀಚೆಗೆ ಸಂತೋಷ್‌ ಲಾಡ್‌ ಕೊಡಗು ಜಿಲ್ಲೆಗೆ ಸಂತೋಷ್‌ ಲಾಡ್‌ ಭೇಟಿ ನೀಡಿದ ಸಂದರ್ಭದ ಫೋಟೋವನ್ನು ಶಾಸಕ ಎ.ಎಸ್.‌ ಪೊನ್ನಣ್ಣ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ವ್ಯಕ್ತಿಯೊಬ್ಬರು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್‌, ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ಎಸ್ಪಿ ಕೆ. ರಾಮರಾಜನ್‌ ಅವರಿಗೆ […]

ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣು ಕಾಡಾನೆ ಸಾವು

ಕುಶಾಲನಗರ : ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣಾನೆಯೊಂದು ಮೃತಪಟ್ಟ ಪ್ರಕರಣ ಮೀನುಕೊಲ್ಲಿ ಅರಣ್ಯದಲ್ಲಿ ವರದಿಯಾಗಿದೆ. ವಾಲ್ನೂರು-ಮಾಲ್ದಾರೆ ನಡುವೆ ಹರಿಯುವ ಕಾವೇರಿ ನದಿಯಲ್ಲಿ ಸೆ.17ರಂದು ಆನೆಯ ಮೃತದೇಹ ಕಂಡುಬಂದಿತ್ತು. ನದಿಯ ಮಧ್ಯ ಭಾಗದಲ್ಲಿ ಮೃತದೇಹವಿದ್ದ ಕಾರಣ ನಿನ್ನೆ ಹೊರಗೆಳೆಯಲು ಸಾಧ್ಯವಾಗಲಿಲ್ಲ. ಇಂದು ಬೋಟ್‌ ಹಾಗೂ ಸಾಕಾನೆಗಳ ನೆರವಿನಿಂದ ಆನೆಯ ಮೃತದೇಹವನ್ನು ನದಿಯಿಂದ ಹೊರತರಲಾಯಿತು. ಮರಣೋತ್ತರ ಪರೀಕ್ಷೆ ವೇಳೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಇದು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಇಲಾಖೆಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಅಲ್ಲೇ […]