ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉದ್ದೇಶವೇನು ಗೊತ್ತಾ..?

ಕರ್ನಾಟಕ ಸರ್ಕಾರವು ವಿವಿಧ ಜಾತಿಗಳ, ವಿಶೇಷವಾಗಿ ಹಿಂದುಳಿದ ಮತ್ತು ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಈ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 22 ರಿಂದ ಮುಂದಿನ ಅಕ್ಟೋಬರ್ ತಿಂಗಳ 7ರವರೆಗೆ ನಡೆಸುತ್ತಿದೆ. ಈ ಸಮೀಕ್ಷೆಯು ಈ ಕೆಳಗಿನ ವಿಷಯಗಳಿಗೆ ಸಂಬಂಧಿಸಿದಂತೆ ನೀತಿ ನಿರೂಪಣೆ ರೂಪಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ನೀತಿ ಯೋಜನೆ: ಈ ಸಮೀಕ್ಷೆಯು ವಿಭಿನ್ನ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಒಳನೋಟವನ್ನು ಸರಕಾರಕ್ಕೆ ಒದಗಿಸುತ್ತದೆ. ಇದರಿಂದ ಸರ್ಕಾರವು […]
ವಿರಾಜಪೇಟೆಯ ಲಾವಣ್ಯಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕಾರ್ಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ ರವರ ಭರತನಾಟ್ಯದಲ್ಲಿನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ […]