ವೀರಾಜಪೇಟೆಯಲ್ಲಿ ಗೋಮಾಂಸ ಮಾರಾಟ – ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!

ವೀರಾಜಪೇಟೆ : ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ವಿಜಯ ನಗರ ನಿವಾಸಿಗಳಾದ ಮೊಹಮ್ಮದ್ ಎಂಬವರ ಪುತ್ರ ಎಂ.ಎಂ. ಮುಸ್ತಾಫ(42), ಮೊಹಮ್ಮದ್ ಹುಸೈನ್ ಎಂಬವರ ಪುತ್ರ ಎಂ.ಎಸ್. ತನ್ವಿರ್(41) ಗೋಮಾಂಸ ಮಾರಾಟಕ್ಕೆ ಮುಂದಾಗಿ ಪೊಲೀಸರ ವಶಕ್ಕೆ ಸಿಕ್ಕವರು. ಇಬ್ಬರು ಸೇರಿಕೊಂಡು ವೀರಾಜಪೇಟೆಯ ವಿವಿಧೆಡೆ ಗೋಮಾಂಸ ಮಾರಾಟಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಮದುವೆ ಕಾರ್ಯಕ್ರಮದಲ್ಲಿ ಜೂಜಾಟ – ಪೊಲೀಸರ ದಾಳಿ – ವಶಪಡಿಸಿಕೊಂಡ ಹಣ ಎಷ್ಟು ಗೊತ್ತಾ..!?

ವೀರಾಜಪೇಟೆ : ವಿವಾಹ ಸಮಾರಂಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಜೂಜಿಗೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೊಗರಗಲ್ಲಿರುವ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯವಿತ್ತು. ಮಂಟಪದಲ್ಲಿನ ಕೊಠಡಿಯೊಂದರಲ್ಲಿ ಮದುವೆಗೆ ಬಂದಿದ್ದ ಕೆಲವರು ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ಅರಿತ ಪೊಲೀಸರು ಕಲ್ಯಾಣ ಮಂಟಪದ ಕೊಠಡಿಯ ಮೇಲೆ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಒಟ್ಟು 4,25,545/ ರೂ. ವಶಕ್ಕೆ ಪಡೆದಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 8 ಮಂದಿಯ ಮೇಲೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು […]