ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆ

Bharathi Pre-University College

ಮಡಿಕೇರಿ:-ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದ್ದು, ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಮಾನಸ ಪಿ.ಜಿ. ಮತ್ತು ಮಾನಸ ಎ.ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು. ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ […]

15 ದಿನದಲ್ಲೇ ಕಿತ್ತು ಹೋದ ಮಡಿಕೇರಿ-ಕತ್ತಲೆಕಾಡು ರಸ್ತೆಯ ತೇಪೆ..! – ವೈಜ್ಞಾನಿಕ ಕಾಮಗಾರಿ ನಡೆಸಲು ಜ.01ರ ಗಡುವು – ಬೃಹತ್‌ ಪ್ರತಿಭಟನೆ ಎಚ್ಚರಿಕೆ

ಮಡಿಕೇರಿ : ಜಿಲ್ಲೆಯ ವಿವಿಧೆಡೆ ಗುಂಡಿಬಿದ್ದ ರಸ್ತೆಗಳಿಗೆ ತೇಪೆ ಹಾಕಿ ಮುಚ್ಚುವ ಕಾಮಗಾರಿ ನಡೆಯುತ್ತಿದ್ದು, ಹಲವು ಕಡೆಗಳಲ್ಲಿ ಇದು ಕಾಟಾಚಾರಕ್ಕೆ ಎಂಬಂತಾಗಿದೆ. ಇದಕ್ಕೆ ಸಾಕ್ಷಿ ಮಡಿಕೇರಿಯಿಂದ ಕತ್ತಲೆಕಾಡುವರೆಗೆ ನಡೆದಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ. ಎರಡು ವಾರದ ಹಿಂದೆ ಈ ಮಾರ್ಗದಲ್ಲಿ ಕಾಮಗಾರಿ ನಡೆದಿದ್ದು, 15 ದಿನ ಕಳೆಯುವಷ್ಟರಲ್ಲೇ ತೇಪೆ ಹಾಕಲಾಗಿದ್ದ ಡಾಂಬರು ಕಿತ್ತು ಹೋಗಿದೆ. ಜಲ್ಲಿಕಲ್ಲುಗಳೆಲ್ಲ ರಸ್ತೆ ಬದಿಯಲ್ಲಿ ಸಂಗ್ರಹವಾಗಿದ್ದು, ಮೊದಲಿದ್ದಂತೆ ಗುಂಡಿಗಳು ಮತ್ತೆ ನಿರ್ಮಾಣವಾಗಿದೆ. ತೀರಾ ಹದಗೆಟ್ಟಿದ್ದ ರಸ್ತೆಯಲ್ಲಿ ಅಲ್ಲಲ್ಲಿ ಕೆಲವು ಗುಂಡಿಗಳನ್ನು ಮುಚ್ಚಿ […]

ಕೊಡಗಿನ ಫಮೀರಾ ಅಹ್ಮದ್‌ಗೆ ಬಹುಭಾಷಾ ಕಂಟೆಂಟ್‌ ಕ್ರಿಯೇಟರ್‌ & ಇನ್ಫ್ಲೂಯೆನ್ಸರ್‌ ಪ್ರಶಸ್ತಿ

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕೊಡಗಿನ ಫಮೀರಾ ಅಹ್ಮದ್‌ ಅವರು ‘ಅತ್ಯುತ್ತಮ ಬಹುಭಾಷಾ ವಿಷಯ ರಚನೆಕಾರರು ಮತ್ತು ಡಿಜಿಟಲ್ ಪ್ರಭಾವಿ (ಇನ್ಫ್ಲೂವೆನ್ಸರ್) ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಒಮಾನಿನ್‌ ಸಲಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಚೆರಿಯಪರಂಬುವಿನ ಪರವಂಡ ಅಹಮದ್ ಮತ್ತು ಝೈನಭ ದಂಪತಿಯ ಪುತ್ರಿಯಾಗಿರುವ ಇವರು ಇನ್ಫರ್ಮೇಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್‌ನಲ್ಲಿ ಬಿಇ ಪದವೀಧರೆಯಾಗಿದ್ದು, ಪ್ರಸ್ತುತ ಮಸ್ಕತ್‌ನಲ್ಲಿ ನೆಲೆಸಿದ್ದಾರೆ. ಈಕೆ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ನಿರ್ದೇಶಕರಾದ ಪರವಂಡ ಎ. ಸಿರಾಜ್ ಸಹೋದರಿ.