Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್‍ಗಳ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿಸೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಿರುಗೂರು, ದೇವರಪುರ, ಮಾಯಮುಡಿ ಧನುಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಡಿಸೆಂಬರ್, 27 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, […]

ಕೆ.ಎಂ.ಎಸ್.ಎ. ವತಿಯಿಂದ ಶಾಲೆಗೆ ಕುರ್ಚಿ ವಿತರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ವಿರಾಜಪೇಟೆ ಸಮೀಪದ ಕಂಡಂಗಾಲದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶುಕ್ರವಾರ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರು ಕುರ್ಚಿಗಳನ್ನು ಶಾಲಾ ಮುಖ್ಯ ಶಿಕ್ಷಕರಾದ ಪವೀನ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಲೀರ ರಶೀದ್, ಹಿಂದೆ ಗ್ರಾಮೀಣ ಪ್ರದೇಶದ ಜನರ ಶೈಕ್ಷಣಿಕ ಪ್ರಗತಿಯಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾಗಿದೆ. ಇಂದಿಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚು ಅನುಕೂಲಕರ […]