ಕೊಡವ ಮುಸ್ಲಿಮರ ಮಾತೃಭಾಷೆಯ ನಿಘಂಟು ಹೊರತರಲು ನಿರ್ಧಾರ

ಪೊನ್ನಂಪೇಟೆ: ಕೊಡಗಿನ ಮೂಲ ನಿವಾಸಿ ಸಮುದಾಯಗಳಲ್ಲಿ ಒಂದಾಗಿರುವ ಕೊಡವ ಮುಸ್ಲಿಮರ ಮಾತೃಭಾಷೆಯ ಎಲ್ಲಾ ಪದಗಳನ್ನು ಸಂಗ್ರಹಿಸಿ ನಿಘಂಟನ್ನು (ಶಬ್ದ ಭಂಡಾರ) ಹೊರತರಲು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ನಿರ್ಧರಿಸಿದೆ. ಕೆಎಂಎ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೊಡವ ಮುಸ್ಲಿಮರ ಮಾತೃಭಾಷೆಯಾದ ‘ಪಯಕ’ದ ಬೆಳವಣಿಗೆ ಮತ್ತು ದಾಖಲೀಕರಣದ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದ್ದು, ಇದಕ್ಕಾಗಿ ಸಮುದಾಯದ […]

ಕೊಡಗು ಗೌಡ ಯುವ ವೇದಿಕೆ ವತಿಯಿಂದ ಶಾಸಕರ ಭೇಟಿ – ಕ್ರೀಡಾಕೂಟದ ಬಗ್ಗೆ ಚರ್ಚೆ

ಮಡಿಕೇರಿ : ಕೊಡಗು ಗೌಡ ಯುವ ವೇದಿಕೆಯ ನೂತನ ಆಡಳಿತ ಮಂಡಳಿಯ ಸದಸ್ಯರು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡರನ್ನು ಭೇಟಿಯಾಗಿ ಏಪ್ರಿಲ್‌ ತಿಂಗಳಲ್ಲಿ ನಡೆಯುವ ಕ್ರೀಟಕೂಟದ ಕುರಿತು ಚರ್ಚಿಸಿದರು. ಅಧ್ಯಕ್ಷ ಬಾಳಾಡಿ ಮನೋಜ್ ನೇತೃತ್ವದಲ್ಲಿ ಶಾಸಕ ಮಂತರ್ ಗೌಡರನ್ನ ಕುಶಾಲನಗರದ ವಿಶ್ರಾಂತಿ ಗೃಹದಲ್ಲಿ ಭೇಟಿಯಾಗಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಯುವ ಒಲಂಪಿಕ್ ಮಾದರಿಯ ಕ್ರೀಡಾ ಕೂಟದ ಕುರಿತು ಚರ್ಚಿಸಲಾಯಿತು. ಈ ಬಾರಿ ಕೊಡಗು ಗೌಡ ಯುವ ವೇದಿಕೆಯ ನೇತೃತ್ವದಲ್ಲಿ ಏಪ್ರೀಲ್ 27 ರಿಂದ […]

ಬೆಟ್ಟಗೇರಿಯಲ್ಲಿ ಎ.ಎಸ್.ಪೊನ್ನಣ್ಣ ರಸ್ತೆ ಕಾಮಗಾರಿಗೆ ಚಾಲನೆ

ಮಡಿಕೇರಿ:- ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕೆಆರ್‍ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೊನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ […]