ಪಯ್ಯವೂರು ಶಿವ ದೇವಾಲಯದಲ್ಲಿ ಊಟ್ ಮಹೋತ್ಸವ – ಬೊವ್ವೇರಿಯಂಡ, ಮುಂಡಿಯೋಳಂಡ ಕುಟುಂಬಸ್ಥರು ಭಾಗಿ

ವೀರಾಜಪೇಟೆ : ಕೊಡಗು ನಿವಾಸಿಗಳು ಮತ್ತು ಮಲಯಾಳಿಗಳು ಜಂಟಿಯಾಗಿ ಕೇರಳದ ಪಯ್ಯಾವೂರಿನ ಶಿವ ದೇವಾಲಯದಲ್ಲಿ ಆಚರಿಸುವ ಹದಿಮೂರು ದಿನಗಳ ಪಯ್ಯವೂರು ಶಿವ ದೇವಾಲಯದ ಊಟ್ಮಹೋತ್ಸವವು ಕೊಡಗಿನಿಂದ ಮುಂಡಿಯೋಳಂಡ ಹಾಗೂ ಬೋವ್ವೇರಿಯಂಡ ಕುಟುಂಬಸ್ಥರ ಎತ್ತು ಪೋರಾಟ್ನೊಂದಿಗೆ ತೆರಳಿ ಅಕ್ಕಿ ಅಳೆಯುವ ಶಾಸ್ತ್ರದೊಂದಿಗೆ ಪ್ರಾರಂಭವಾಯಿತು. ಪಟ್ಟಣದ ಪಳಸ್ಸಿ ಭಗವತಿ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಕೊಡವರನ್ನು ಪಯ್ಯಾವೂರು ದೇವಸ್ವಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ವಿ. ಅನೀಶ್, ವಿಶ್ವಸ್ಥ ಮಂಡಳಿ ಸದಸ್ಯ ಕೆ.ವಿ. ಉತ್ತಮರಾಜನ್, ಮತ್ತು ಆಚರಣೆ ಸಮಿತಿಯ ಪದಾಧಿಕಾರಿಗಳಾದ ಪಿ.ಸುಂದರನ್, ಫಲ್ಗುಣನ್ ಮೆಳೇದತ್, […]
ಮಡಿಕೇರಿ ಪೊಲೀಸ್ ಪೇದೆ ಸಂದೀಪ್ ನಿಧನ

ಮಡಿಕೇರಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಂದೀಪ್ ರೈ (42) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೂಲತಃ ಮಡಿಕೇರಿಯವರಾದ ಇವರು ಕಳೆದ ವಾರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಸಂದೀಪ್ ಅವರು ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಜನಸ್ನೇಹಿ ವ್ಯಕ್ತಿತ್ವದ ಮೂಲಕ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು.