ಪುಲ್ವಾಮಾ ದಾಳಿಯ ಕಹಿ ನೆನಪು – ಮಡಿಕೇರಿಯಲ್ಲಿ ವಿಭಿನ್ನವಾಗಿ ಹುತಾತ್ಮ ಯೋಧರ ಸ್ಮರಣೆ

ಮಡಿಕೇರಿ : ಪುಲ್ವಾಮಾ ದಾಳಿಯ ಕಹಿ ನೆನಪನ್ನು ಮಡಿಕೇರಿಯಲ್ಲಿ ವಿಭಿನ್ನವಾಗಿ ಸ್ಮರಿಸಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ನಗರದ ಜನರಲ್‌ ತಿಮ್ಮಯ್ಯ ವೃತ್ತದ ಮೈಸೂರು ರಸ್ತೆಯ ಪ್ರಯಾಣಿಕರ ತಂಗುದಾಣಕ್ಕೆ ಬಣ್ಣ ಬಳಿದು ಚಂದಗಾಣಿಸಿದ್ದರು. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರವನ್ನು ತಂಗುದಾಣದ ಆವರಣದಲ್ಲಿಟ್ಟು ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ ಪ್ರಮುಖರು ಹಾಗೂ ಸಾರ್ವಜನಿಕರು ನಮಿಸಿದರು. ಈ ಸಂದರ್ಭ ನಿವೃತ್ತ ಸೇನಾಧಿಕಾರಿ ಗೌಡಂಡ ತಿಮ್ಮಯ್ಯ, ನಿವೃತ್ತ ಯೋಧ ಲೋಕೇಶ್, ಸೈನಿಕ […]

ಶಿವರಾತ್ರಿ ಪ್ರಯುಕ್ತ ಮುತ್ತಪ್ಪ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

ವೀರಾಜಪೇಟೆ : ವೀರಾಜಪೇಟೆಯ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಮಹಾ ಶಿವರಾತ್ರಿಯ ಅಂಗವಾಗಿ ಮೀನುಪೇಟೆಯ ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮುತ್ತಪ್ಪ ಕಲಾ ಮಂಟಪದಲ್ಲಿ ಮಹಾ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿದೆ. ಪೂಜೆಗೆ ಬರುವಾಗ ಎರಡು ಬಾಳೆ ಎಲೆ, ಹೂವು ಹಾಗೂ ದೀಪ ತರಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮುತ್ತಪ್ಪ ಮಲಯಾಳಿ ಸಂಘದ ಅಧ್ಯಕ್ಷ ಸುಮೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ