ಆಧುನಿಕತೆಯ ಬರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತಿರುವುದು ವಿಷಾದನೀಯ: ವಿನೋದ್ ಮೂಡಗದ್ದೆ

ವಿರಾಜಪೇಟೆ: ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ದತಿಯು ಕಣ್ಮರೆಯಾಗುತಿರುವುದನ್ನು ನಾವು ಮನಕಾಣುತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ, ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೦೬ ದಿನಕಾಲ ವಾರ್ಷಿಕ ವಿಶೇಷ […]