ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ

ಮಡಿಕೇರಿ : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ, ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಖಜಾಂಜಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ, ಸಹ ಖಜಾಂಜಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ, ಭೂಮಿಕಾ ಮಾಚಂಗಡ ಆಯ್ಕೆಯಾಗಿದ್ದಾರೆ. […]
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ದುರ್ಮರಣ..!

ಸುಂಟಿಕೊಪ್ಪ : ವಿದ್ಯುಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಸುಂಟಿಕೊಪ್ಪ ಬಳಿಯ ಕೆಂಚೆಟ್ಟಿ ಎಂಬಲ್ಲಿ ಸಂಭವಿಸಿದೆ. ಮಾದಾಪುರ ಜಂಬೂರು ನಿವಾಸಿ ಅನೀಲ್(39) ಮೃತ ದುರ್ದೈವಿ. ಸ್ನೇಹಿತ ಹರೀಶ್ ಎಂಬವರೊಂದಿಗೆ ಬೈಕ್ನಲ್ಲಿ ಸುಂಟಿಕೊಪ್ಪದಿಂದ ಮಾದಾಪುರ ಕಡೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವೇರಿ ಕಾಲೇಜಿನಲ್ಲಿ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ ಪುಸ್ತಕ ಬಿಡುಗಡೆ

ಗೋಣಿಕೊಪ್ಪಲು: ಕಾವೇರಿ ಕಾಲೇಜಿನ ಸಹ ಪ್ರಾಧ್ಯಾಪಕಿ ಪುತ್ತಾಮನೆ ಪೂಜಾ ಶರಣು ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವೇಣುಗೋಪಾಲ್ ಹೆಚ್.ಎಸ್. ಅವರು ಜಂಟಿಯಾಗಿ ರಚಿಸಿರುವ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ (ಕನ್ನಡ ಆವೃತ್ತಿ) ಮತ್ತು ‘Foundation of Commerce’ (ಆಂಗ್ಲ ಆವೃತ್ತಿ) ಎಂಬ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾಲಯಗಳ ನೂತನ ಪಠ್ಯಕ್ರಮವನ್ನು ಆಧರಿಸಿ ಈ ಪುಸ್ತಕಗಳನ್ನು ಸಿದ್ಧಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪೂರಕ ಮಾಹಿತಿಯನ್ನು ಒದಗಿಸುವ ಉದ್ದೇಶ ಹೊಂದಿವೆ. ಕಾರ್ಯಕ್ರಮದಲ್ಲಿ […]