ಈದ್‌ ಹಬ್ಬದ ಪ್ರಯುಕ್ತ ದುಬೈನಲ್ಲಿ ಯಶಸ್ವಿಯಾಗಿ ಜರುಗಿದ ವಾಲಿಬಾಲ್ ಪಂದ್ಯಾವಳಿ

ದುಬೈ : ಈದ್‌ ಉಲ್‌ ಫಿತ್ರ್‌ ಹಬ್ಬದ ಪ್ರಯುಕ್ತ ದುಬೈನಲ್ಲಿ Coorg Eid Meet 2K26‌ ವಾಲಿಬಾಲ್‌ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. NI Model School Garhood Indoor Stadiumನಲ್ಲಿ ನಡೆದ ಕ್ರೀಡಾಕೂಟದಲ್ಲಿ ಹಲವಾರು ತಂಡಗಳು ಭಾಗವಹಿಸಿದ್ದವು. RYC YEMMEMADU A ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದರೆ, FOUR STAR EDAPALA ತಂಡ ರನ್ನರಪ್‌ ಸ್ಥಾನ ಪಡೆಯಿತು. ಅತಿಥಿಗಳು ಬಹುಮಾನ ವಿತರಿಸಿದರು. ಝುಬೈರ್ ಚಿಟ್ಟಡೆ, ಅಕ್ಬರ್‌ ಮೀತಲತಂಡ, ಚಚ್ಚು ಗುಂಡಿಕೆರೆ ಈ ಪಂದ್ಯಾವಳಿ ಆಯೋಜಿಸಿದ್ದರು.

ವೀರಾಜಪೇಟೆಯಲ್ಲಿ ಪ್ರಥಮ ವರ್ಷದ ಹನುಮ ಜಯಂತಿ ಏಪ್ರಿಲ್‌ 02ರಂದು – ಹಲವು ವಿಶೇಷತೆ

ವೀರಾಜಪೇಟೆ : ಪ್ರಥಮ ಬಾರಿಗೆ ಏಪ್ರಿಲ್ ೨ ರಂದು ವೀರಾಜಪೇಟೆಯಲ್ಲಿ ಅದ್ದೂರಿ ಹನುಮ ಜಯಂತಿ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಈ ಸಂಬoಧ ವಿರಾಜಪೇಟೆ ನಗರದಲ್ಲಿ ಅದ್ದೂರಿ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹನುಮ ಜಯಂತಿ ಆಯೋಜನಾ ಸಮಿತಿಯ ಅಧ್ಯಕ್ಷ ಅಂಜಪರವoಡ ಅನಿಲ್ ಮಂದಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಅತ್ಯಂತ ವಿಜೃಂಬಣೆಯಿoದ ಹನುಮ ಜಯಂತಿಯನ್ನು ಆಚರಿಸಲು ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ. ಕಾರ್ಯಕ್ರಮಕ್ಕೆ ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ಹಾಗೂ ಖ್ಯಾತ ವಾಗ್ಮಿ  […]

ಅದ್ಧೂರಿಯಾಗಿ ನೆರವೇರಿತು ವಿರಾಜಪೇಟೆಯಲ್ಲಿ ಮುತ್ತಪ್ಪ ತೆರೆ ಮಹೋತ್ಸವ

ವಿರಾಜಪೇಟೆಯ ಮೀನುಪೇಟೆಯ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಸ್ಥಾನದ ೮೨ ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವು ೩ ದಿನಗಳ ಕಾಲ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಸಾವಿರಾರು ಭಕ್ತಾಧಿಗಳು ಬುಧವಾರ ರಾತ್ರಿಯಿಂದ ಗುರುವಾರ ಸಂಜೆವರೆಗೂ ಜಾಗರಣೆಯಿದ್ದು, ದೇವರ ದರ್ಶನ ಪಡೆದರು. ಮಂಗಳವಾರ ಬೆಳಗ್ಗೆಯಿಂದಲೇ ಜಾತ್ರಾ ಮಹೋತ್ಸವ ಪ್ರಾರಂಭಗೊಂಡಿತ್ತು. ಮುತ್ತಪ್ಪ, ವಸೂರಿಮಾಲಾ, ತಿರುವಪ್ಪನ್, ಗುಳಿಗ, ವಿಷ್ಣುಮೂರ್ತಿ, ಪೌವ್ವದಿ ದೇವತೆಗಳು ಭಕ್ತಾಧಿಗಳಿಗೆ ದರ್ಶನ ನೀಡಿದರು. ಪಯಂಗುತ್ತಿ ಹಾಗೂ ತುಲಾಭಾರ, ಇನ್ನಿತರ ಹರಕೆ ಕಾರ್ಯಗಳನ್ನು […]