ಮಡಿಕೇರಿ-ಕುಶಾಲನಗರ ಹೆದ್ದಾರಿಯಲ್ಲಿ ಕಾಡುಪ್ರಾಣಿ ಡಿಕ್ಕಿ – ದಂಪತಿಗೆ ಗಂಭೀರ ಗಾಯ..!

ಸುಂಟಿಕೊಪ್ಪ : ಕಾಡುಪ್ರಾಣಿಯೊಂದು ವಾಹನಕ್ಕೆ ಡಿಕ್ಕಿಯಾಗಿ ದಂಪತಿ ಗಾಯಗೊಂಡಿರುವ ಘಟನೆ ಕೆದಕಲ್ ಬಳಿ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ದಂಪತಿ ಎಮ್ಮೆಮಾಡುವಿನಿಂದ ಕುಶಾಲನಗರ ಕಡೆ ತೆರಳುತ್ತಿದ್ದರು. ಈ ವೇಳೆ 7ನೇ ಮೈಲ್ ಬಳಿ ಪಕ್ಕದ ತೋಟದಿಂದ ಕಾಡುಕೋಣವೊಂದು ಏಕಾಏಕಿ ಹೆದ್ದಾರಿಗೆ ಬಂದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯವಾಗಿದೆ. ಇಬ್ಬರನ್ನೂ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಏಪ್ರಿಲ್ 3 ಮತ್ತು 4ರಂದು ಕೆದಮುಳ್ಳೂರು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ

ವಿರಾಜಪೇಟೆ:ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಏಪ್ರಿಲ್ 3 ಮತ್ತು 4 ರಂದು ನಡೆಯಲಿದೆ.ಕೆದಮುಳ್ಳೂರು ಚಾಮುಂಡಿ ಹಬ್ಬ ಎಂದರೆ ಎಲ್ಲೆಡೆ ಪ್ರಚಲಿತದಲ್ಲಿದ್ದು ಅತ್ಯಂತ ಹೆಸರುವಾಸಿಯಾಗಿದೆ. ಹಾಗೂ ಅತ್ಯಂತ ಶಕ್ತಿಯನ್ನು ಹೊಂದಿರತಕ್ಕAತಹ ಚಾಮುಂಡಿ ದೇವಿಯ ಕ್ಷೇತ್ರವಾಗಿದೆ. ಹಾಗಾಗಿ ಈ ಉತ್ಸವದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ತರು, ದೂರ ದೂರದ ಊರುಗಳಿಂದ ಭಕ್ತರು, ಆಗಮಿಸಿ ದೇವರಲ್ಲಿ ಹರಕೆ ಹೊತ್ತುಕೊಂಡು ತಮ್ಮ ಸಂಕಷ್ಟಗಳನ್ನು ಪರಿಹರಿಸಿಕೊಳ್ಳುತ್ತಾರೆ. ೨ ರಂದು ರಾತ್ರಿ ೮:೩೦ ಗಂಟೆಗೆ […]