ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆವಿ ಸಿದ್ದಾಪುರ ಮಾರ್ಗದಲ್ಲಿ ಏಪ್ರಿಲ್, 18 ರಂದು (ನಾಳೆ) ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ, ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್‍ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.