ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಸಭೆ

kodagu District Police

ಪ್ರವಾಸಿಗರ ಸುರಕ್ಷತೆ ಹಾಗೂ ನಿಯಮಗಳ ಪಾಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೋಂಸ್ಟೇ, ಹೋಟೆಲ್ ಹಾಗೂ ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಹೋಂಸ್ಟೇ ಮತ್ತು ಹೋಟೆಲ್‌ಗಳ ಕಡ್ಡಾಯ ನೋಂದಣಿ, ಪ್ರವಾಸಿಗರ ಸುರಕ್ಷತಾ ಕ್ರಮಗಳು, ಸಿಬ್ಬಂದಿಯ ಹಿನ್ನೆಲೆ (ಗುಣನಡತೆ) ಪರಿಶೀಲನೆ ಹಾಗೂ ವಿದೇಶಿ ಪ್ರವಾಸಿಗರ ಕಡ್ಡಾಯ ನೋಂದಣಿ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಿತಿನ್‌ ಚಕ್ಕಿ […]

SSLC Result: ಹೆಗ್ಗಳ ಸರ್ಕಾರಿ ಶಾಲೆಗೆ 100% ಫಲಿತಾಂಶ

Heggala Government School

ವಿರಾಜಪೇಟೆ: ಹೆಗ್ಗಳ (Heggala) ಗ್ರಾಮದ ಸರ್ಕಾರಿ ಪ್ರೌಢ ಶಾಲೆಯು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 100% ಫಲಿತಾಂಶವನ್ನು ಪಡೆಯುದರ ಮೂಲಕ ಸಾಧನೆಯನ್ನು ಮಾಡಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಡಿಸ್ಟಿಂಕ್ಷನ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 19 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಸ್ಥಾನದಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿನಿ ಪ್ರೇಕ್ಷಾ ಬಿ. ಹೆಚ್.558 ಅಂಕಗಳನ್ನು ಪಡೆದುಕೊಂಡು 89.28% ಮೂಲಕ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರಾದ ಸುನೀತಾ ರವರು ಮಾಹಿತಿ ನೀಡಿದ್ದಾರೆ.

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

electricity

ಏಪ್ರಿಲ್, 25 ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸೋಮವಾರಪೇಟೆ ಕುಸುಬೂರು, ಕಾರೆಕೊಪ್ಪ, ಸಜ್ಜಳ್ಳಿ, ಯಡವಾರೆ, ಹೊಸತೋಟ, ಐಗೂರು, ಗರಗಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.